Headlines

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

ಶರಾವತಿ ಸಂತ್ರಸ್ಥರು ಒಂದು ಇಂಚು ಜಾಗ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ – ಹರತಾಳು ಹಾಲಪ್ಪ|hinneera habba

ಅದ್ದೂರಿಯಾಗಿ ಜರುಗಿದ ಶರಾವತಿ ಹಿನ್ನೀರ ಮೇಳ – ಶರಾವತಿ ಆರತಿ ಶರಾವತಿ ಸಂತ್ರಸ್ತರು ಒಂದು ಇಂಚು ಜಾಗವೂ ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಶಪಥ ಮಾಡಿ ಹೇಳುತ್ತೇನೆ ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಹೊಸನಗರ ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ರೈತರು ಸರ್ಕಾರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ರೈತರಲ್ಲಿ ಆತಂಕ ಬೇಡ. ರೈತರನ್ನು ಒಕ್ಕಲೇಬ್ಬಿಸಲು ಬಿಡಲ್ಲ. ಸದ್ಯದಲ್ಲೆ ಶುಭಸುದ್ದಿ ನೀಡಲಿದ್ದೇವೆ. ರೈತರ…

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens. ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹಾರನಹಳ್ಳಿಯ ಶೇಖ್…

Read More

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More