ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More

ಮದ್ಯಪಾನ ಮಾಡಬೇಡಿ ಎಂಬ ಪತ್ನಿಯ ಬುದ್ಧಿಮಾತಿಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ವಿಪರೀತ ಕುಡಿತದ ದಾಸನಾಗಿದ್ದ ಪತಿಗೆ ಪತ್ನಿ ಬುದ್ದಿ ಮಾತು ಹೇಳಿದ್ದಾಳೆ. ಇದನ್ನೆ ಮನಸ್ಸಿಗೆ ಹಚ್ಚಿಕೊಂಡ ಪತಿರಾಯ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಾಗರ ತಾಲೂಕಿನ ಅಡೂರು ಗ್ರಾಮದ 40 ವರ್ಷದ ಸುಬ್ರಹ್ಮಣ್ಯನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,ಈ ಸಂಬಂಧ ಮೃತನ ಪತ್ನಿ ಯಶೋಧ ಸಾಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಯಶೋಧ ತನ್ನ ಗಂಡ ಸುಬ್ರಹ್ಮಣ್ಯನಿಗೆ ಕುಡಿಯೋದನ್ನು ಬಿಟ್ಟು ಬಿಡು ಎಂದು ಬುದ್ದಿ ಮಾತು ಹೇಳಿದ್ದಾಳೆ.ಪತ್ನಿ ಬುದ್ದಿ ಮಾತಿಗೆ ಮನನೊಂದ ಸುಬ್ರಹ್ಮಣ್ಯ, ಮನೆಯಲ್ಲಿ ಯಾರು…

Read More

ಹೊಂಬುಜ ಶ್ರೀಗಳಿಂದ ಮುಖ್ಯಮಂತ್ರಿ ಭೇಟಿ :

ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು. ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ…

Read More

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ

Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ  ಘಟನೆ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಬೆಂಗಳೂರಿನಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ

ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು‌ ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ‌ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…

Read More

RIPPONPETE | ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ 

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 354ನೇ ಆರಾಧನ ಮಹೋತ್ಸವ  ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 354ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.ಆರಾಧನ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರ ದಂಡು ಹರಿದು ಬಂದಿತು.

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More