Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಪುನೀತ್ ರಾಜಕುಮಾರ್ ನಿಧನಕ್ಕೆ ಕನ್ನಡಪರ ಸಂಘಟನೆಗಳಿಂದ ನಾಳೆ ರಿಪ್ಪನ್ ಪೇಟೆ ಬಂದ್ ಗೆ ಕರೆ:

ರಿಪ್ಪನ್ ಪೇಟೆ : ಜನಪ್ರಿಯ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ರಿಪ್ಪನ್ ಪೇಟೆಯ ಪುನೀತ್ ರಾಜ್ ಅಭಿಮಾನಿ ಬಳಗ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 6ರಿಂದ 12 ಗಂಟೆ ತನಕ ರಿಪ್ಪನ್ ಪೇಟೆ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಲಾಗಿದೆ. ರಿಪ್ಪನ್ ಪೇಟೆಯ ವರ್ತಕರು, ಸಾರ್ವಜನಿಕರು ,ಪುನೀತ್ ರಾಜ್ ಅಭಿಮಾನಿ ಬಳಗದವರು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಿದ್ದು , ಬೆಳಿಗ್ಗೆ 11:30 ಕ್ಕೆ  ಗ್ರಾಮ…

Read More

ಹೊಸನಗರದ ಕೊಡಚಾದ್ರಿ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ : ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿ |ಕ್ಯಾಡ್ ಫೌಂಡೇಶನ್ ವತಿಯಿಂದ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಉಚಿತ ವಿತರಣೆ|hosangar

ಹೊಸನಗರ: ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ರೂಂಗಳ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಸುಮಾರು 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ 09 ಗಾಡ್ರೇಜ್ ಬೀರುಗಳನ್ನು ಮುರಿದು ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ರೂ. ಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ 2:45 ರ ಸುಮಾರಿಗೆ ನಡೆದಿದೆ. ನಿನ್ನೆ ಸಂಜೆಯಿಂದ ಪಟ್ಟಣ ಹಾಗೂ ಸುತ್ತಮುತ್ತ…

Read More

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information. ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ…

Read More

ಸಾಗರ: ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದಿಂದ ರಕ್ತದಾನ ದಿನಾಚರಣೆ

ಸಾಗರ:182ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಸಾಗರದ ಸರ್ಕಾರಿ ಆಸ್ಪತ್ರೆಯ ರೋಟರಿ ರಕ್ತ ನಿಧಿ ಸಂಸ್ಥೆ ಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು       ಸಾಗರ ತಾಲ್ಲೂಕು ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷರಾದ ಶ್ರೀಯುತ ಷಣ್ಮುಖ ಅವರು ಮಾತನಾಡಿ ರಕ್ತದಾನ ಮಹಾದಾನ ರಕ್ತದಾನ ಶಿಬಿರವನ್ನು ಅನೇಕ ವರ್ಷಗಳಿಂದ ನಮ್ಮ ಸಂಘ ನಡೆಸಿಕೊಂಡು ಬರುತ್ತಿದ್ದು ಅನೇಕ ಜನರಿಗೆ ಅನುಕೂಲವಾಗಿದೆ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ಮತ್ತು…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.  ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…

Read More

ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.  ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More