Headlines

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ

ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌ ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್‌…

Read More

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !!lightning

ಅರಣ್ಯಪ್ರದೇಶದಲ್ಲಿ ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ  ಸಮೀಪದ ಬೆಳಂದೂರು ಚೆನ್ನಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ  ಅರೆಬರೆ ಸುಟ್ಟು ಕೊಳೆತ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ(55) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದ ಬತ್ತಿ ರಮೇಶಪ್ಪ ಎಂಬ ವ್ಯಕ್ತಿ  ಕಳೆದ ೪ ದಿನಗಳಿಂದ ಕಾಣೆಯಾಗಿದ್ದು  ಎಲ್ಲಾ ಕಡೆ ಹುಡುಕಿ ಸಂಬಂಧಿಕರ ಮನೆಗೆ ಹೋಗಿರಬಹುದು ತಿರುಗಿ…

Read More

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು. ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ  ಕಾರ್ಮಿಕ ನಾಗರಾಜರವರನ್ನು…

Read More

ಮಂಗನಕಾಯಿಲೆಗೆ ಗ್ರಾಮಪಂಚಾಯಿತಿ ಸದಸ್ಯ ಬಲಿ!!!

ಸಾಗರ :  ತಾಲ್ಲೂಕಿನ ಅರಳಗೋಡಿನಲ್ಲಿ ಮಂಗನ ಕಾಯಿಲೆಗೆ ಅಲ್ಲಿನ ಗ್ರಾಮಪಂಚಾಯ್ತಿ ಸದಸ್ಯರೊಬ್ಬರು ಸಾವನ್ನಪ್ಪಿದ್ದಾರೆ. 55 ವರ್ಷದ ರಾಮಸ್ವಾಮಿ ಕರುಮನೆ ಎಂಬುವರು ಮೃತರು. ಕಳೆದ ಎಪ್ರಿಲ್​ 24 ರಂದು ಇವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಜ್ವರ ಇನ್ನೂ ಹೆಚ್ಚಾದ ಕಾರಣ ಹೀಗಾಗಿ ಮಣಿಪಾಲದ ಕಸ್ತೂರಿಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಸ್ವಾಮಿಯವರು ಇಂದು  ಮಧ್ಯಾಹ್ನ ದ  ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ವಾಲಿಬಾಲ್ : ವಿಭಾಗ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕ್ರೀಡಾಪಟುಗಳು |volleyball

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಪೈನಲ್ ಪಂದ್ಯಾವಳಿಯಲ್ಲಿ ಗಾಜನೂರು ತಂಡವನ್ನು ಮಣಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳಾದ ಪ್ರೀತಮ್ , ಸಾತ್ವಿಕ್ ಸುಧನ್ವ , ಅಮಾನ್ ,ಗಗನ್‌ , ಗಣೇಶ ,ನವೀನ್ ,ಮಿಥುನ್ , ಶಶಾಂಕ್,ಕುಮಾರ್ ಜೆ ,ಪ್ರಜ್ವಲ್…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…

Read More

ರಿಪ್ಪನ್‌ಪೇಟೆ : ಮೇಯಲು ಬಿಟ್ಟಿದ್ದ 15 ಹಸುಗಳು ನಾಪತ್ತೆ – ದೂರು ದಾಖಲು

ರಿಪ್ಪನ್‌ಪೇಟೆ : ಮೇಯಲು ಬಿಟ್ಟಿದ್ದ 15 ಹಸುಗಳು ನಾಪತ್ತೆಯಾಗಿರುವ ಫ಼ಟನೆ ಪಟ್ಟಣದ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ದೇವರಾಜ್ ಗೌಡ ರವರಿಗೆ ಸೇರಿದ 15 ಹಸುಗಳನ್ನು 21-07-2022 ರಂದು ಮನೆಯ ಬಳಿಯೇ ಮೇಯಲು ಬಿಡಲಾಗಿತ್ತು ಸಂಜೆಯ ವೇಳೆ ಮನೆಗೆ ಹಸುಗಳು ಬಾರದೇ ಇದ್ದಾಗ ಎಲ್ಲಾ ಕಡೆ ಹುಡುಕಿದ್ದಾರೆ.ಸತತ ನಾಲ್ಕು ದಿನ ಹಸುಗಳನ್ನು ಹುಡುಕಿ ಪತ್ತೆಯಾಗದ ಹಿನ್ನಲೆಯಲ್ಲಿ ಇಂದು (26-07-2022) ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಯುವಕನ ಬಂಧನ|Arrested

ತೀರ್ಥಹಳ್ಳಿ : ಹಲವು ಯುವತಿಯರ ಜೊತೆಗೆ ಸಲುಗೆಯಿಂದ ಇದ್ದು, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ ಆರೋಪ ಸಂಬಂಧ ಯುವಕನ ವಿರುದ್ಧ ಪ್ರಕರಣ ದಾಖಲಾಗುತ್ತಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ತೀರ್ಥಹಳ್ಳಿಯ ಎಬಿವಿಪಿ ಸಂಘಟನೆಯ ನಾಯಕ ಕೆಲವು ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ವೈರಲ್‌ ಆಗಿತ್ತು. ಇದರ ಬೆನ್ನಿಗೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ…

Read More
Exit mobile version