ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :
ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…