ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ| health camp
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ <
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ <
ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ವಿವರ: ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ…
ಶಿವಮೊಗ್ಗದ ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್ ಸಿಂಗ್, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್ ನ ತರಕಾರಿ ಮಾರುಕಟ್ಟೆಯ ಹತ್ತಿರ ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್ ಸಿಂಗ್ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…
Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…
ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…
ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…
20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಕೋಳಿ ಮೊಟ್ಟೆಯನ್ನು ತಿನ್ನಲು ಹೋದ ನಾಗರಹಾವು ಕೋಳಿ ಗೂಡಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ವಡಾಹೊಸಳ್ಳಿ ಅಂಗನವಾಡಿ ಕಾರ್ಯಕರ್ತೆ ಸುಶೀಲ ಎಂಬುವವರ ಮನೆಯ ಕೋಳಿಗೂಡಿನಲ್ಲಿ ಮೊಟ್ಟೆ ತಿನ್ನಲು ಹೋಗಿ ನಾಗರಹಾವೊಂದು ಗೂಡಿನಲ್ಲಿ ಬಂಧಿಯಾಗಿತ್ತು, ಕೋಳಿಗೂಡಿನಲ್ಲಿ ಮೊಟ್ಟೆ ತಿಂದು ಗೂಡಿನಲ್ಲಿ ಹೆಡೆ ಬಿಚ್ಚಿ ಆಟವಾಡುತ್ತಿರುವ ನಾಗರಹಾವನ್ನು ಕಂಡ ಮನೆಯವರು ತಕ್ಷಣ ರಿಪ್ಪನ್ಪೇಟೆಯ ಉರಗ ತಜ್ಞ ಗಂಗಾಧರ(ಗಂಗಣ್ಣ) ರವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಉರಗತಜ್ಞ ಗಂಗಾಧರ್ ಸ್ಥಳಕ್ಕೆ ತೆರಳಿ ಕೋಳಿ ಗೂಡಿನಲ್ಲಿ…
ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…