ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು…

Read More

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ

ಸಿಗಂದೂರು ಸೇತುವೆಗೆ ಯಡಿಯೂರಪ್ಪ ಹೆಸರಿಡುವಂತೆ ವೀರಶೈವ ಮಹಾಸಭಾ ವತಿಯಿಂದ ಒತ್ತಾಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಆಗ್ರಹಿಸಿದ್ದಾರೆ. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ರಾಜ್ಯಕ್ಕೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಿಲ್ಲೆಯನ್ನು  ವಿಶ್ವ…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More