Headlines

Ripponpete | ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರತರಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಅವರಲ್ಲಿ ಅಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ, ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯ ವಾಹಿನಿಗೆ ಬರುತ್ತಾರೆ ಇಂಥ ಕೆಲಸಗಳನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಿಕ್ಕ ಜೇನಿ  ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದರ್ಶ್ ನಿಧನ|accident

ಹೊಸನಗರ: ಸೊನಲೆ ಜಂಕ್ಷನ್ ಬಳಿ  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಟ್ಟಣದ ಯುವಕ ಆದರ್ಶ್ ನಿಧನ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ (23)ಕಳೆದ ಭಾನುವಾರದಂದು ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡಿದ್ದರು, ಇವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಮರಳಿ ಕರೆದುಕೊಂಡು ಬಂದು ಚಿಕಿತ್ಸೆ  ನೀಡಲಾಗುತ್ತಿತ್ತು, ವಿಧಿವಶಾತ್ ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಕನ್ನಡ ಸಂಘಕ್ಕೆ ಪದಾದಿಕಾರಿಗಳ ಆಯ್ಕೆ:

ರಿಪ್ಪನ್ ಪೇಟೆ : ಪಟ್ಟಣದಲ್ಲಿ ನೂತನವಾಗಿ ಕಸ್ತೂರಿ ಕನ್ನಡ ಸಂಘ ಅಸ್ತಿತ್ವಕ್ಕೆ ಬಂದಿದ್ದು ಸೋಮವಾರ ಅದರ ಪದಾದಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಪಟ್ಟಣದಲ್ಲಿ ಸೋಮವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ಅಧ್ಯಕ್ಷರಾಗಿ ಆರ್ ಎ ಚಾಬುಸಾಬ್ , ಪ್ರಧಾನ ಕಾರ್ಯದರ್ಶಿಯಾಗಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..

Read More

ರಿಪ್ಪನ್‌ಪೇಟೆ : ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ|BJP

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ತಳಲೆ ವಾರ್ಡ್ ನ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಕ್ಷದ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಫೆ.25 ರಂದು ನಡೆದ ಉಪ ಚುನಾವಣೆಯಲ್ಲಿ ಸಮೀಪದ ಸ್ಪರ್ಧಿಗಿಂತ 87 ಮತಗಳ ಅಂತರದಿಂದ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ…

Read More

ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…

Read More

ರಿಪ್ಪನ್ ಪೇಟೆ: ಗುರು ರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನ ಮಹೋತ್ಸವ:

ರಿಪ್ಪನ್‌ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್‌ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ…

Read More