Headlines

ಗಂಟಲಲ್ಲಿ‌ ಬಲೂನ್ ಸಿಲುಕಿ ಬಾಲಕ ಸಾವು

ಬಲೂನ್ ಗಂಟಲಲ್ಲಿ‌ ಸಿಲುಕಿ ಬಾಲಕ ಸಾವು ಶಿರಸಿ : ಬಲೂನ್‌ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್‌ ನಾರಾಯಣ್‌ (13)  ಮೃತ ದುರ್ದೈವಿ. ಬಲೂನ್‌ ಗೆ ಗಾಳಿ ತುಂಬಿ ಆಟವಾಡುತ್ತಿದ್ದ.  ಬಲೂನ್‌ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್‌ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು…

Read More

ಬಂಧಿತರಾಗಿರುವ ಶಂಕಿತ ಉಗ್ರರದ್ದು ತೀರ್ಥಹಳ್ಳಿಯ ಮೂಲ ಹೌದು ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು : ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವರು, ಮತಾಂಧರ ಪರಿಚಯದಿಂದ ಈ ರೀತಿಯಾಗಿದೆ.ಬಂಧಿತ ಶಂಕಿತ ಉಗ್ರರಿಗೆ ಕರಾವಳಿ, ಕೇರಳ ಲಿಂಕ್ ಇದೆ. ಹೀಗಾಗಿಯೇ ಇಂತಹ ಕೃತ್ಯ ನಡೆಯುತ್ತಿದೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಸಹ ಆಗಿದೆ. ನಮ್ಮ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು. ಈ ಹಿಂದೆ…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೈಡ್ – ಆವರಣದಲ್ಲಿ ಪತ್ತೆಯಾಯ್ತು ಮೊಬೈಲ್,ಬೀಡಿ ಬೆಂಕಿಪೊಟ್ಟಣ|raid

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಅತಿಥ್ಯ ಮುಂದುವರೆದಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಶಿಕ್ಷೆ ವಿಧಿಸಿ ಸಮಾಜದಲ್ಲಿ ಸುಧಾರಿತ ವ್ಯಕ್ತಿಗಳಾಗಿ ಹೊರಗೆ ಬರಲಿ ಎಂಬ ಕಲ್ಪನೆ ಕಲ್ಪನೆಯಾಗಿ ಉಳಿದಿದೆ. ಸುಧಾರಿತ ವ್ಯಕ್ತಿಗಳಾಗುವ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲು, ಬೀಡಿಗಳು, ಗಾಂಜಾಗಳು ಸಪ್ಲೆ ಆಗುತ್ತಿವೆ ಎಂದರೆ ಅಚ್ಚರಿ ಪಡುವಂತಾಗಿದೆ. ಜೈಲು ಸಿಬ್ಬಂದಿಗಳೇ ಅಪರಾಧಿಗಳ ಜೊತೆ ಕೈ ಜೋಡಿಸುತ್ತಿದ್ದಾರಾ ಎಂಬ ಅನುಮಾನ ಹೆಚ್ಚಾಗಿದೆ. ಈ ಅನುಮಾನಕ್ಕೆ ಈ ಎಫ್ಐಆರ್ ಪುಷ್ಠಿ ನೀಡುತ್ತಿದೆ. ಅ. 21 ರಂದು ಕೇಂದ್ರ ಕಾರಾಗೃಹದಲ್ಲಿ ತುಂಗ…

Read More

ಪ್ರಿಯಕರ ಉಪನ್ಯಾಸಕನ ಮದುವೆ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ : ಮದುವೆ ಮಂಟಪದಲ್ಲೆ ವಿಷ ಕುಡಿದ ನವ ವಧು

ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ  ನಗರದ ಓ.ಟಿ.ರಸ್ತೆಯ‌ಲ್ಲಿ ನಡೆದಿದೆ. ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ…

Read More

ರಾಷ್ಟ್ರಕವಿ ಕುವೆಂಪುರವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ನನ್ನು ವಜಾಗೊಳಿಸಿ ಪ್ರಕರಣ ದಾಖಲಿಸುವಂತೆ ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳಿಂದ ಪ್ರತಿಭಟನೆ

ಪಠ್ಯಪುಸ್ತಕದಲ್ಲಿ ರಾಷ್ಟ್ರಕವಿ ಕುವೆಂಪುರವರನ್ನು ಅವಮಾನಿಸುವ ರೀತಿಯಲ್ಲಿ ಪಠ್ಯಪುಸ್ತಕವನ್ನು ರಚಿಸಿ ನಾಡ ಕವಿಯನ್ನು ಅವಮಾನಿಸುತ್ತಿರುವ ಕರ್ನಾಟಕ ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ರೋಹಿತ್ ಚಕ್ರತೀರ್ಥರವರನ್ನು ವಜಾ ಮಾಡುವುದರ ಜೊತೆಗೆ ದೇಶ ದ್ರೋಹಿ ಕೇಸು ಹಾಕಿ ಜೈಲಿಗೆ ಕಳುಹಿಸಬೇಕೆಂದು ಹೊಸನಗರ ತಾಲೂಕಿನ ವಿವಿಧ ಪಕ್ಷ ಹಾಗೂ ಸಂಘಟನೆಗಳು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರ ಕಾಲೇಜಿನ ಪ್ರಾಂಶುಪಾಲರಾದ ಸೊನಲೆ ಶ್ರೀನಿವಾಸ್‌, ರೋಹಿತ್ ಚಕ್ರತೀರ್ಥನು ಅಪ್ರಭುದ್ಧ ಹಾಗೂ ನಾಡಪ್ರಜ್ಞೆ ಇಲ್ಲದ ವ್ಯಕ್ತಿಯಾಗಿದ್ದು ಈತನ ಮಾತು…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More

ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More