Headlines

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ. ಆಯುಕ್ತರು ಮಂಗಳೂರು…

Read More

400 ಕೋಟಿ ರೂ. ಕ್ಯಾಶ್ ದರೋಡೆ ತಡವಾಗಿ ಬೆಳಕಿಗೆ – ಆ ಘಾಟ್‌ನಲ್ಲಿ ಏನಾಯಿತು? | Biggest Cash Robbery

ಘಾಟ್‌ನಲ್ಲಿ ನಡೆದಿರುವ 400 ಕೋಟಿ ರೂ. ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದಲ್ಲಿ ನಡೆದ ಈ ಭಾರೀ ಅಪರಾಧಕ್ಕೆ ಸಂಬಂಧಿಸಿದಂತೆ SIT ರಚನೆಗೊಂಡಿದ್ದು, ಮೂರು ರಾಜ್ಯಗಳ ಪೊಲೀಸರು ಸಂಯುಕ್ತ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಐವರು ಬಂಧನವಾಗಿದ್ದು, ಇನ್ನಷ್ಟು ದೊಡ್ಡ ಹೆಸರುಗಳು ಬಹಿರಂಗವಾಗುವ ಸಾಧ್ಯತೆ ಇದೆ. ಕರ್ನಾಟಕ–ಗೋವಾ–ಮಹಾರಾಷ್ಟ್ರ ಗಡಿಭಾಗದ ಚೋರ್ಲಾ ಘಾಟ್ ಪ್ರದೇಶದಲ್ಲಿ ನಡೆದಿರುವ ಸುಮಾರು 400 ಕೋಟಿ ರೂ. ಮೌಲ್ಯದ ಭಾರೀ ನಗದು ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಭಾರೀ…

Read More

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ :  ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More
Exit mobile version