Headlines

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

ತೀರ್ಥಹಳ್ಳಿ : ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಜೀವ ಬೆದರಿಕೆ

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನ ಕಿಡ್ನಾಪ್ ಮಾಡಿ ನಾಲ್ವರು ಆರೋಪಿಗಳು ಆಯುಧದಿಂದ ಥಳಿಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪದ ಜಟ್ಟಟ್ ನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ನಗರದ ನಿವಾಸಿ ಮುಜೀಬ್ (35) ಎಂಬುವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿರುವುದು ರಾಮನ್, ರಹೀಮ್, ಶಫಿ ಹಾಗೂ ಸುಹೇಲ್ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೆ. 23 ರಾತ್ರಿ ಮುಜೀಬ್ ಮೇಲೆ ಹಲ್ಲೆ ನೆಡೆಸಿ ಕಿಡ್ನಾಪ್ ಮಾಡಿದ್ದರು. ಆದರೆ ತಪ್ಪಿಸಿಕೊಂಡು ಬಂದಿದ್ದ ಮುಜೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ

ರೈಲ್ವೆ ಹಳಿ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತದೇಹ ಪತ್ತೆ An unidentified young woman’s body was found near Ravindranagar railway tracks under suspicious circumstances. Police are investigating whether it was a train accident or another cause of death. ಶಿವಮೊಗ್ಗ : ರವೀಂದ್ರನಗರ ರೈಲು ಹಳಿ ಬಳಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತದೇಹದ ಮುಖ ಭಾಗ ಸಂಪೂರ್ಣ ಹಾನಿಗೊಳಗಾದ ಕಾರಣ, ಗುರುತು…

Read More

ಏಕ ಕಾಲದಲ್ಲಿ 5 ಲಕ್ಷ ಜನ ಕನ್ನಡ ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ. ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ರೈತನೊಬ್ಬ ಸಾಲಭಾದೆ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಭಾನುವಾರದಂದು ಬೆಳೆಗೆ ಸಿಂಪಡಿಸಿದ್ದ ಕ್ರಿಮಿನಾಶಕವನ್ನು ಸೇವನೆ ಮಾಡಿ ಅಸ್ವಸ್ಥಗೊಂಡವರನ್ನು ಅವರ ಹೆಂಡತಿ ಮಗ ಉಪಚರಿಸಿ ತಕ್ಷಣ ಚಿಕಿತ್ಸೆಗಾಗಿ ರಿಪ್ಪನ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More

ಹೊಸನಗರ ತಾಲೂಕ್ ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ಆಯ್ಕೆ :

ಹೊಸನಗರ : ತಾಲ್ಲೂಕು ವೀರಶೈವ-ಲಿಂಗಾಯತ ಪರಿಷತ್ ನ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ವೀರಶೈವ-ಲಿಂಗಾಯತ ಪರಿಷತ್ ನ ಅಧ್ಯಕ್ಷರಾಗಿ ಆನಂದ್ ಮೆಣಸೆ ರವರು ಆಯ್ಕೆಯಾಗಿದ್ದಾರೆ.  ಪ್ರಧಾನ ಕಾರ್ಯದರ್ಶಿಗಳಾಗಿ ಮಹೇಶ್ ದೇವರಸಲಕಿ,ದೇವು ಹುಳಿಗದ್ದೆ,ಲೋಕೇಶ್ ಶುಂಠಿಕೊಪ್ಪ,ಖಜಾಂಚಿಯಾಗಿ ಚಂದ್ರಶೇಖರ್ ಹಾಲುಗುಡ್ಡೆ,ಉಪಾದ್ಯಕ್ಷರುಗಳಾಗಿ ಜಗದೀಶ್ ಕುಕ್ಕಳಲೆ,ದಯಾಕರ್,ವಿಶ್ವನಾಥ್ ಹೊನ್ನೆಬೈಲು,ಪ್ರವೀಣ್ ಎಂ.ಗುಡ್ಡೆಕೊಪ್ಪ,ಕಮಲಾಕರ್ ಕಮದೂರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳಾಗಿ ಸಚಿನ್ ಗೌಡ ಗರ್ತಿಕೆರೆ,ನಿರಂಜನ್ ರಿಪ್ಪನ್ ಪೇಟೆ,ಟಿ.ಎಲ್ ಷಣ್ಮುಖ,ಶಿವಮೂರ್ತಿ ಹರತಾಳು,ಸುದಾಕರ್ ಬೆನವಳ್ಳಿ.ಹಾಗೂ 26 ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ಹಾಗೂ ವೀರಶೈವ-ಲಿಂಗಾಯತ ಕಾವಲು ಪರಿಷತ್ತು,ಕಾನೂನು‌‌ ಪರಿಷತ್ತು,ಪ್ರಚಾರ ಪರಿಷತ್ತು ಗಳನ್ನು…

Read More

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…

Read More