ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಕುತೂಹಲ ಘಟ್ಟದತ್ತ ಹುಂಚ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಆರ್ ಎಂಎಂ ಗೆ ಪ್ರತಿಷ್ಟೆಯ ಚುನಾವಣೆ..!!!RMM

ಹುಂಚಾ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಚುನಾವಣೆ. ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಅರ್ ಎಮ್ ಎಮ್ ಗೆ ಪ್ರತಿಷ್ಟೆ, ಪ್ರಸಕ್ತ ಸದಸ್ಯರ ಹೊಂದಾಣಿಕೆ ಅಸ್ತ್ರ, ಹಲವಾರು ಹೊಸಬರ ನಾಮಪತ್ರ ಸಲ್ಲಿಕೆ ಪ್ರತ್ಯಾಸ್ತ್ರ ಕುತೂಹಲ ಘಟ್ಟದತ್ತ ಹುಂಚಾ ಸೊಸೈಟಿ ಚುನಾವಣೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿದ್ದ ಹುಂಚಾ ವ್ಯವಸಾಯ  ಸಹಕಾರ ನಿಯಮಿತದ ಚುನಾವಣ ಕಣ ರಂಗೇರಿದ್ದು ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯೂ…

Read More

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ

ಮಾಲೀಕನ ಸಾವಿನ ದುಃಖ ತಾಳಲಾರದೆ ಪ್ರಾಣ ತ್ಯಜಿಸಿದ ಸಾಕು ನಾಯಿ ಭದ್ರಾವತಿ: ನಾಯಿ — ನಿಷ್ಠೆ, ಪ್ರೀತಿ ಮತ್ತು ಬದ್ಧತೆಯ ಪ್ರತೀಕ. ಮಾಲೀಕನಿಗಾಗಿ ಜೀವವನ್ನೇ ಪಣಕ್ಕಿಡುವ ಈ ಪ್ರಾಣಿ, ಕೆಲವೊಮ್ಮೆ ಅವನಿಂದ ದೂರವಾಗುವುದನ್ನೇ ಸಹಿಸಲಾರದು. ಭದ್ರಾವತಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಅದಕ್ಕೆ ಜೀವಂತ ಉದಾಹರಣೆ. ನಗರದ ಹುತ್ತಾಕಾಲನಿಯ ಜಿಂಕ್‌ಲೈನ್ ಪ್ರದೇಶದ ನಿವಾಸಿ ಲಾರೆನ್ಸ್ (61) ಪೈಂಟರ್ ಕೆಲಸ ಮಾಡುತ್ತಿದ್ದು, ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರು ನಿಧನರಾದರು. ಆಸ್ಪತ್ರೆಯಿಂದ ಅವರ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆಯೇ, ಮನೆಯ…

Read More

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ|Reward

ಕರ್ನಾಟಕ ರಾಜ್ಯದ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ. 2022 ನೇ ಸಾಲಿನ ಮುಖ್ಯಮಂತ್ರಿ ಪದಕ ಜಿಲ್ಲೆಯಲ್ಲಿ ಮೂವರಿಗೆ ಲಭಿಸಿದೆ. ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕೆ.ಶಿವಕುಮಾರ್, ಡಿಎಆರ್ ನ ಸಿಬ್ಬಂದಿ ಜೈಜಗದೀಶ್ ಗೆ ಲಭಿಸಿದೆ. ಮುಖ್ಯಮಂತ್ರಿ ಪದಕವನ್ನ ನೀಡುವ…

Read More