ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು
ಹುಂಚ : ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…