Headlines

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (31-05-2022) ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಸೇರಿದಂತೆ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಹೆದ್ದಾರಿಪುರ, ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More