ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read More

ಮಂಜುನಾಥ ಗೌಡರನ್ನು ನಂಬಿ ನಾನು ಹಾಳಾದೆ – ಮಂಜುನಾಥ್ ಪೂಜಾರಿಯಿಂದ ಹೇಳಿಕೆ

ಶಿವಮೊಗ್ಗ : ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವಿನ ಒಳಜಗಳ ಈಗ  ಮತ್ತೊಂದು ಹೊಸ ರೂಪ ಪಡೆದಿದೆ. ಹೆಗಲತ್ತಿಯ ತೋಟದ ಕೊಪ್ಪದ ಮಂಜುನಾಥ್ ಪೂಜಾರಿ ಮಾತನಾಡುತ್ತಾ ನಾನು ಮಂಜುನಾಥ್ ಗೌಡರ ಕೈಗೊಂಬೆಯಾಗಿದ್ದೇನೆ,ಅವರ ಶಿಷ್ಯ ದಿನೇಶ್ ನನ್ನನು ಕಿಡ್ನಾಪ್ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪೂಜಾರಿ ಆರ್.ಎಂ.ಮಂಜುನಾಥ್ ಗೌಡರು ನನ್ನನ್ನ ಬಳಸಿಕೊಂಡು ಕಿಮ್ಮನೆ ರತ್ನಾಕರ್ ಅವರ ಬಗರ್ ಹುಕುಂ ಹೋರಾಟವನ್ನ ಮೊಟಕುಗೊಳಿಸುವ ಪ್ರಯತ್ನ…

Read More

ರಿಪ್ಪನ್‌ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ  ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation

ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್‌ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್‌ ಬಂಕ್‌ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್‌ ಎಲ್‌ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್‌.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್‌ ಬೋರ್ಡ್‌ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More