Headlines

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನ.

  ರಿಪ್ಪನ್ ಪೇಟೆ: ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ ಕನ್ನಡದ ಉಪನ್ಯಾಸಕ ರಾಜು ಶಿವಪುರ ಮಾತನಾಡಿ ಈ ಬಾರಿಯ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡಕ್ಕಾಗಿ ನಾವು ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಂಡಿದೆ ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕೈಜೋಡಿಸಬೇಕೆಂದರು.  ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಭಾಷಾ ಸಂಸ್ಕೃತಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ಎದೆ ಮಟ್ಟದ ನೀರಿನಲ್ಲಿ ಸಾಗಿ ಅಂತ್ಯಸಂಸ್ಕಾರ – ಗೃಹಸಚಿವರ ಕ್ಷೇತ್ರದಲ್ಲಿ ಏನಿದು ಅವ್ಯವಸ್ಥೆ !

ತೀರ್ಥಹಳ್ಳಿ : ಇಲ್ಲಿ ಮಳೆಗಾಲ ಬಂತೆಂದರೆ ಸಾಕು ಜನರ ಪರದಾಟ ಆರಂಭವಾಗುತ್ತದೆ. ಇಲ್ಲಿ ಮಳೆಗಾಲದಲ್ಲಿ ಬದುಕಲೂ ಕಷ್ಟ.. ಸತ್ತರೂ ಕಷ್ಟ. ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..! ಹೌದು, ಆಶ್ಚರ್ಯವಾದರೂ ಸತ್ಯ. ಇದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದ ಗ್ರಾಮವೊಂದರ ಪರಿಸ್ಥಿತಿ. ತಾಲೂಕಿನ ಹೊಸಹಳ್ಳಿ ಗ್ರಾ.ಪಂಚಾಯತ್ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಮೃತ ಶರೀರವನ್ನು ಗ್ರಾಮಸ್ಥರು ನೀರು ತುಂಬಿದ ರಸ್ತೆಯಲ್ಲಿ ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಅವರು ವಯೋ…

Read More

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು

ರಸ್ತೆ ಅಪಘಾತ – ಶಾಲಾ ಶಿಕ್ಷಕಿ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ.25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ ಮಾವಿನಕಟ್ಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು.ಈ ವೇಳೆ ಲಾರಿಯೊಂದು ಶಕುಂತಲಾ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ ಎಂದು…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂರಕ : ಆರಗ ಜ್ಞಾನೇಂದ್ರ.

 ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ  ತೆರೆಯುವಿಕೆಯಿಂದ  ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ  ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.  ಅಮೃತ ಗ್ರಾಮದಲ್ಲಿ  ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ  ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More
Exit mobile version