ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!!|accident

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದ ಕಾರು.!! ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ತೋಟಕ್ಕೆ ಬಿದ್ದು ಮೂವರಿಗೆ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸೋಮವಾರ ನೆಡೆದಿದೆ. ತಾಲೂಕಿನ ಆಗುಂಬೆ ಸಮೀಪದ ಕಲ್ಮನೆ ಬಳಿ ಕಾರ್ಕಳದಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರಿನ ಗ್ಲಾಸ್ ಒಡೆದು ಮೂವರನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮೂವರಿಗೂ ಪೆಟ್ಟಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತರೀಕೆರೆ ಮೂಲದ ಕುಟುಂಬ ತಮ್ಮ ಮಗನನ್ನು ಕಾರ್ಕಳಕ್ಕೆ ಬಿಟ್ಟು…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More

ಸ್ಮಶಾನದ ಜಾಗ ಒತ್ತುವರಿ : ಮೃತದೇಹ ಇಟ್ಟು ಗ್ರಾಮಸ್ಥರ ಪ್ರತಿಭಟನೆ

ಸೊರಬ : ಸರ್ಕಾರದಿಂದ ಮಂಜೂರಾದ ರುದ್ರಭೂಮಿಯನ್ನು ಅತಿಕ್ರಮಣಕಾರರಿಂದ ತೆರವುಗೊಳಿಸುವಂತೆ ಒತ್ತಾಯಿಸಿ ಊರಿನ ಗ್ರಾಮಸ್ಥರೆಲ್ಲಾ ಸೇರಿ ಮೃತದೇಹವನ್ನು ಇಟ್ಟು ಸೊರಬ ಮುಖ್ಯ ರಸ್ತೆಯಲ್ಲಿ ಪ್ರತಿಭಟಿಸಿದ ಘಟನೆ ನಡೆದಿದೆ. ತಾಲೂಕಿನ ಹೆಚ್ಚೆ ಗ್ರಾಮದಲ್ಲಿ ಮಂಜೂರಾದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಿ ಗಡಿ ಗುರುತಿಸುವಂತೆ ಹತ್ತಾರು ಬಾರಿ ಮನವಿ ನೀಡಿದರೂ ಸಂಬಂಧಪಟ್ಟವರು  ಸ್ಪಂದಿಸಿಲ್ಲ ಹಾಗಾಗಿ ಈ ದಿನ ಹೆಚ್ಚೆ ಊರಿನಲ್ಲಿ ನಿಧನರಾದವರ ಮೃತದೇಹವನ್ನು ಸೊರಬ ಪಟ್ಟಣಕ್ಕೆ ತಂದು ಪ್ರತಿಭಟಿಸಿದ್ದಾರೆ. ಸರ್ಕಾರದಿಂದ 4 ಎಕರೆ ಜಾಗ ಮಂಜೂರಾಗಿದೆ ಆದರೆ…

Read More

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ Argentina defeated England 2-1 in a dramatic FIFA World Cup 2026 semifinal with late goals from Enzo Fernandez and Lautaro Martinez to book a place in the final against Spain. ಅಟ್ಲಾಂಟಾ, ಜು.16: 2026ರ ಫಿಫಾ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟಿನಾ ತಂಡವು…

Read More

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More