Headlines

ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಮೇಲ್ಚಾವಣಿ ಕುಸಿತ | ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ|Rpet

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಕಲ್ಯಾಣಪುರದಲ್ಲಿ ಮನೆಯೊಂದರ ಗೋಡೆ ಹಾಗೂ ಮೇಲ್ಚಾವಣಿ ಕುಸಿತವಾಗಿರುವ ಘಟನೆ ನಡೆದಿದೆ. ಇಂದು ಸುರಿದ ಭಾರಿ ಮಳೆಗೆ ಕಲ್ಯಾಣಪುರ ಗ್ರಾಮದ ಕೃಷ್ಣ ಹೆಗಡೆ  ಎಂಬುವವರ ಮನೆಯ ಹಿಂಬದಿಯ ಗೋಡೆ ಹಾಗೂ‌ ಮೇಲ್ಚಾವಣಿ ಕುಸಿದಿದ್ದು ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ರಿಪ್ಪನ್‌ಪೇಟೆಯ ಹೂವಿನ ವ್ಯಾಪಾರಿ ಪುಷ್ಪಾ ನಿಧನ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

Ripponpete | ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ

ಇದು ವ್ಯಕ್ತಿ ಆಧಾರಿತ ಚುನಾವಣೆಯಲ್ಲ, ರಾಷ್ಟ್ರೀಯತೆಯ ಚುನಾವಣೆ – ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ;-ಈ ಭಾರಿಯಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ವ್ಯಕ್ತಿ ಆಧಾರಿತ ಚುನಾವಣೆಯಲ್ಲ ರಾಷ್ಟ್ರೀಯತೆಯ ಚುನಾವಣೆ ಎಂದು ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಲೋಕಸಭಾ ಚುನಾವಣೆಯ ಬಿಜೆಪಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಕೇಂದ್ರದಿಂದ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ತರಲಾಗಿರುವ ಅನುಧಾನದ ಕಾಮಗಾರಿಗಳ ಕುರಿತು ಮತದಾರರಿಗೆ ಮುಟ್ಟಿಸಬೇಕು ಹಾಗೂ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಭಾಗ್ಯಲಕ್ಷಿö್ಮ…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man

ಹಳ್ಳದಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಲೈನ್ ದುರಸ್ತಿಪಡಿಸಿದ ಲೈನ್ ಮ್ಯಾನ್ – ವೀಡಿಯೋ ವೈರಲ್ | power man ಮಲೆನಾಡಿನಲ್ಲಿ ವರುಣನ ಆರ್ಭಟಕ್ಕೆ ಹಲವಾರು ಕಡೆ ಅನೇಕ ಅವಘಡಗಳು ಸಂಭವಿಸಿದೆ, ಇದೀಗ ವಿದ್ಯುತ್ ಲೈನ್ ಸರಿಪಡಿಸಲು ಹಳ್ಳದಲ್ಲಿ ಈಜಿಕೊಂಡು ಹೋಗಿರುವ ವೀಡಿಯೋ ವೈರಲ್ ಆಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಪವರ್ ಮ್ಯಾನ್ ವೊಬ್ಬ ರಭಸವಾಗಿ ಹರಿಯುತ್ತಿರವ ಹಳ್ಳದಲ್ಲಿ ಈಜಿ ವಿದ್ಯುತ್ ಲೈನ್ ಸರಿಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು :

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ತನ್ನದೇ ಕಾರಿನಲ್ಲಿ  ಕಳುಹಿಸಿಕೊಡುವ ಮೂಲಕ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾನವೀಯತೆ ಮೆರೆದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್​ನಲ್ಲಿ ಪೋಟೋ ತೆಗೆಯುವಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿ ಇರುತ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿದೇವರ ಬನ ಗ್ರಾಮದ…

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಎರಡು ಬೈಕ್(bike) ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ಬಾಳೂರು(baluru) ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ರಾಮಚಂದ್ರ (24) ಮತ್ತು ಅರುಣ್ ಕುಮಾರ್ (30) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ಸಿದ್ದಪ್ಪನಗುಡಿ – ಕೆಂಚನಾಲ(Kenchanala) ರಸ್ತೆಯಲ್ಲಿ ಬಜಾಜ್ ಪಲ್ಸರ್ ಬೈಕ್ ಹಾಗೂ ರಾಯಲ್ Enfield ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಪಲ್ಸರ್ ಬೈಕ್ ನಲ್ಲಿದ್ದ…

Read More

ರೈಲ್ವೆ ಇಲಾಖೆ ಅಧಿಕಾರಿಗಳೇ ಬೇಜಾವಬ್ದಾರಿತನ ಬಿಡಿ:: ಆನಂದಪುರ- ಯಡೇಹಳ್ಳಿ, ಅಂದಾಸುರ ರೈಲ್ವೆ ಲೆವಲಿಂಗ್ ಕ್ರಾಸ್ ಹಂಪ್ಸ್ ನ ಸಮಸ್ಯೆಗಳತ್ತ ಗಮನ ಕೊಡಿ.!!!

ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ  ಪ್ರಯಾಣಿಕರಿಗೆ  ತೊಂದರೆಯೂ ಆಗುತ್ತಿದೆ. ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ…

Read More