Headlines

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :

ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ|Shivamogga police

ಗಣಪತಿ ಹಬ್ಬದ ಭದ್ರತೆಯಲ್ಲಿ ಪೊಲೀಸರೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಗೆ ಅವಕಾಶ ಶಿವಮೊಗ್ಗ : ಮುಂಬರುವ ಗಣೇಶ ಹಬ್ಬದ ಭದ್ರತೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳಲಾರಂಭಿಸಿದೆ. ಇದೀಗ ಗಣೇಶೋತ್ಸವದ ಭದ್ರತಾ ಕಾರ್ಯಕ್ಕೆ ನಾಗರೀಕರು ಹಾಗೂ ಸಂಘಸಂಸ್ಥೆಗಳ ನೆರವು ಪಡೆದುಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ, ಪೊಲೀಸ್ ಇಲಾಖೆ ಸಿಬ್ಬಂದಿಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಸಾರ್ವಜನಿಕರು – ಸಂಘಸಂಸ್ಥೆಗಳಿಗೆ ಅವಕಾಶ ಕಲ್ಪಿಸಿದೆ. ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು…

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ರಿಪ್ಪನ್ ಪೇಟೆ : ಕಟ್ಟುಕೋವಿಯಿಂದ ಕಾಲು ಕಳೆದುಕೊಂಡ ಯುವಕನ ಸಂಕಷ್ಟ ಕೇಳುವವರಾರು !!??

ರಿಪ್ಪನ್ ಪೇಟೆ : ತನ್ನದಲ್ಲದ ತಪ್ಪಿಗೆ ಕಾಲನ್ನು ಕಳೆದುಕೊಂಡು ಸಂಕಷ್ಟಕೊಳಗಾಗಿರುವ ಯುವಕನ ಗೋಳು ಕೇಳುವರಿಲ್ಲದೇ ಪರಿತಪಿಸುತ್ತಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯತಿಯ ಬೆನವಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ (26) ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಈಗ ಕಾಲು ಕಳೆದುಕೊಂಡು ಸಂಕಷ್ಟಕ್ಕೊಳಗಾಗಿ ಜೀವನ ಪರಿಹಾರಕ್ಕಾಗಿ ಬೇರೆಯವರಲ್ಲಿ ಕೈಚಾಚುವ ಪರಿಸ್ಥಿತಿ ಬಂದೊದಗಿದೆ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ಗಂಡ ಹಾಗೂ…

Read More

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More