Headlines

ಶಿವಮೊಗ್ಗದ ಸೂಳೆಬೈಲ್ ನಲ್ಲಿ ಕಾರಿನ ಮೇಲೆ ಕಲ್ಲು ತೂರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ :

ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮತ್ತೂರಿನಲ್ಲಿರುವ ತಮ್ಮ ಸಂಬಂಧಿಯ ಮನೆಗೆ…

Read More

ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer

ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ‌ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…

Read More

ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರಿಗೆ ಜೈಲು ಶಿಕ್ಷೆ

Two men were sentenced to one year in jail by a Shivamogga court for assaulting a person with a beer bottle and issuing death threats at a bar in Shikaripura in 2022. ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಜೈಲು ಶಿಕ್ಷೆ ಹಾಗೂ…

Read More

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ ತೀರ್ಥಹಳ್ಳಿ: ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಮಳೆಯಿಂದ ಧರೆ ಕುಸಿದು ಅಡಿಕೆ ಮರ ಬಿದ್ದ ಘಟನೆ ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡ್ಲು ಎಂಬ ಗ್ರಾಮದ ಮಂಜುನಾಥ್ ಶೆಟ್ಟಿ ಎಂಬುವರ ತೋಟದ ಹಿಂಭಾಗ ಹಳ್ಳದ ನೀರು ಹರಿಯುತ್ತಿದ್ದು ಹಳ್ಳದ ನೀರಿನ ರಭಸಕ್ಕೆ ಧರೆ ಕುಸಿದು 30 ಕ್ಕೂ ಹೆಚ್ಚು ಅಡಿಕೆ ಮರ ನೆಲಕ್ಕೆ ಉರುಳಿದ್ದವು. ವಿಷಯ ತಿಳಿಯುತ್ತಿದ್ದಂತೆ ತಾಲೂಕು…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಎಡೆಬಿಡದೆ ಸುರಿದ ಮಳೆಗೆ ಕೋಡಿ ಹರಿದು ಜಮೀನುಗಳು ಜಲಾವೃತ !!

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಪ್ಪಿಗ  ಹಾಗೂ ಕಲ್ಲುಗಟ್ಟ ಸಂಪರ್ಕ ರಸ್ತೆಯ ನಾರಾಯಣಯ್ಯ ಅವರ ಮನೆ ಹತ್ತಿರ ಸತತ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹತ್ತಿರದ ತಾವರೆಕೆರೆ ತುಂಬಿ ಕೋಡಿ ಹರಿದಿದ್ದು ಗದ್ದೆಗಳು ನೀರಿನಲ್ಲಿ ಮುಳುಗಿದ್ದು ಜನರು ಓಡಾಡುವ ಸಂಪರ್ಕ ರಸ್ತೆಯೂ ಸಹ ನೀರಿನಿಂದ ಜಲಾವೃತವಾಗಿದೆ.ಈ ಮಾರ್ಗದಲ್ಲಿ ಓಡಾಡುವ ಜನರು ಹಾಗೂ ಬೈಕ್ ಸವಾರರು ಈ ರಸ್ತೆಯಲ್ಲಿ  ಬಿದ್ದು ಕೈಕಾಲು ಮುರಿದುಕೊಂಡ  ಪ್ರಕರಣಗಳು ನಡೆದಿವೆ.  ಈ ಸಂಪರ್ಕ ರಸ್ತೆ ಹಾಗೂ…

Read More