Headlines

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಯೋಧ ಗಿರೀಶ್ ಗೆ ಗೌರವ ಸಮರ್ಪಣೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಪಿ. ರಮೇಶ್ ಅವರ ಮಾಲೀಕತ್ವದ ಸಾಗರ ರಸ್ತೆಯಲ್ಲಿರುವ ಪಿ.ವಿ. ಸ್ಟೋರ್‌ನಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ಗಿರೀಶ್ ಅವರಿಗೆ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಯೋಧರಿಗೆ ಶಾಲು ಹೊದಿಸಿ, ಫಲತಾಂಬೂಲ ಮತ್ತು ನೆನಪಿನ ಕಾಣಿಕೆ ನೀಡಿ ಅವರ ಸೇವಾಭಾವವನ್ನು ಸ್ಮರಿಸಲಾಯಿತು. ನಂತರ ಸಿಹಿ ತಿನ್ನಿಸಿ ನಿವೃತ್ತಿ ಜೀವನವು ಸುಖಮಯವಾಗಿ ಮತ್ತು…

Read More

ರಿಪ್ಪನ್ ಪೇಟೆಯಲ್ಲಿ ನೂತನ ಕನ್ನಡ ಸಂಘಕ್ಕೆ ಪದಾದಿಕಾರಿಗಳ ಆಯ್ಕೆ:

ರಿಪ್ಪನ್ ಪೇಟೆ : ಪಟ್ಟಣದಲ್ಲಿ ನೂತನವಾಗಿ ಕಸ್ತೂರಿ ಕನ್ನಡ ಸಂಘ ಅಸ್ತಿತ್ವಕ್ಕೆ ಬಂದಿದ್ದು ಸೋಮವಾರ ಅದರ ಪದಾದಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಪಟ್ಟಣದಲ್ಲಿ ಸೋಮವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ಅಧ್ಯಕ್ಷರಾಗಿ ಆರ್ ಎ ಚಾಬುಸಾಬ್ , ಪ್ರಧಾನ ಕಾರ್ಯದರ್ಶಿಯಾಗಿ…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ತೆರೆದ ಬಾವಿಗೆ ಬಿದ್ದ ಕಾಡೆಮ್ಮೆ ಮರಿ – ಅರಣ್ಯ ಇಲಾಖೆಯಿಂದ ರಕ್ಷಣೆ|rescue

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಪ್ಪಳಿ ಲಿಂಗದಹಳ್ಳಿ ಗ್ರಾಮದ ಅರವತ್ತು ಅಡಿ ಆಳದ ತೆರೆದ ಬಾವಿಗೆ ಕಾಡೆಮ್ಮೆಯ ಎರಡು ವರ್ಷದ ಮರಿಯೊಂದು ಆಕಸ್ಮಿಕವಾಗಿ ಬಿದ್ದ ಘಟನೆ ಬುಧವಾರ ನಡೆಯಿತು. ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿದ್ದ ಕಾಡೆಮ್ಮೆ ಮರಿಯನ್ನು ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕರುವಿನ ಕೋಡಿಗೆ ಹಗ್ಗ ಹಾಕಿ ಮುಳುಗದಂತೆ ಎಚ್ಚರ ವಹಿಸಿದರು. ವನ್ಯಜೀವಿ ವಿಭಾಗದ ಅರಿವಳಿಕೆ ತಜ್ಞ ಡಾ. ಮುರಳಿ ಮನೋಹರ್ ಆಗಮಿಸಿ…

Read More

ಕಾರ್ ಚಾಲಕನ ಎಡವಟ್ಟು, ಚರಂಡಿಗೆ ಇಳಿದ ಖಾಸಗಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ರಿಪ್ಪನ್ ಪೇಟೆ  : ಕಾರ್ ಚಾಲಕನ ಎಡವಟ್ಟಿನಿಂದ ಸಂಭವಿಸಲಿದ್ದ ಭಾರಿ ಅಪಘಾತವೊಂದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಗುರುವಾರದ  ಸೂಡೂರು  ನಡೆದಿದೆ. ಎದುರಿನಿಂದ ಬಂದ ಕಾರು ಚಾಲಕನೋರ್ವ ತನ್ನ ಕಾರನ್ನು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ, ಅಪಘಾತವನ್ನು ತಪ್ಪಿಸಲು ಖಾಸಗಿ ಬಸ್ಸನ್ನು ರಸ್ತೆ ಬದಿಗೆ…

Read More

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More