Headlines

ಅವೈಜ್ಞಾನಿಕ ಚರಂಡಿ ಕಾಮಗಾರಿ: ನಾಲ್ಕು ರಸ್ತೆಯ ನೀರು,ಹೊಟೇಲ್ ತ್ಯಾಜ್ಯ ರೈತರ ಜಮೀನಿಗೆ::

ರಿಪ್ಪನ್ ಪೇಟೆ :ಅವೈಜ್ಞಾನಿಕ ಚರಂಡಿಯಿಂದ ಪಟ್ಟಣ ದ ನಾಲ್ಕು ರಸ್ತೆಯ ನೀರು,ಹೋಟೆಲ್ ನ ತ್ಯಾಜ್ಯಗಳು ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆಯ ಎದುರಿನ ರೈತರ ಜಮೀನಿಗೆ ಹೋಗುತ್ತಿದೆ.ಸ್ಥಳೀಯ ನಿವಾಸಿಗಳು ಹಾಗೂ ರೈತರು ಹಲವಾರು ಬಾರಿ ದೂರು ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಪರದಾಡುವಂತಾಗಿದೆ. ಚರಂಡಿಯಿಂದ ಹರಿಯುತ್ತಿರುವ, ಮಳೆ ನೀರು,ಹೋಟೆಲ್ ಗಳ ತ್ಯಾಜ್ಯ, ಮಧ್ಯದ ಬಾಟಲಿಗಳು ಸಂಪೂರ್ಣವಾಗಿ ಕೃಷಿ ಭೂಮಿ ಸೇರುತ್ತಿವೆ.ರಿಪ್ಪನ್ ಪೇಟೆ ಹೊಸನಗರ ರಸ್ತೆಯ ಕೂಗಳತೆ ದೂರದಲ್ಲಿ ಇರುವ ಚಿಪ್ಪಿಗರ ಕೆರೆಯ ಸಮೀಪ ಈ ಚರಂಡಿಯ…

Read More

ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!

ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ  ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…

Read More

84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Former Karnataka Chief Minister B.S. Yediyurappa celebrated his 84th birthday with special prayers at Siddhivinayaka Temple in Ripponpet, as BJP leaders, workers, and supporters wished him good health and continued political strength. 84ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ | ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು 84ನೇ…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಆಗುಂಬೆ ಸಮೀಪದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು | Lighting

ಸಿಡಿಲು ಬಡಿದು ವ್ಯಕ್ತಿ ಸಾವು | lighting ತೀರ್ಥಹಳ್ಳಿ : ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಹೆಚ್ಚಾಗಿದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ( 40 ವರ್ಷ ) ಎಂದು ಗುರುತಿಸಲಾಗಿದ್ದು ಇವರು ಬೀದರಗೋಡು ಗ್ರಾಮದವರು.   ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More
Exit mobile version