Headlines

ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು….

Read More

ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯ ಖಾಸಗಿ ಫೋಟೋ ವೈರಲ್ ಮಾಡಿದ ಪಾಗಲ್ ಪ್ರೇಮಿ

ಯುವತಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಆಕೆಯೊಂದಿಗೆ ಇದ್ದ ಖಾಸಗಿ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ನ್ಯೂಮಂಡ್ಲಿಯ ಯುವತಿಯೊಬ್ಬಳು ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ಕೆಲಸ ಮಾಡಿಕೊಂಡಿದ್ದ ಭರತ್ ಎಂಬ ಯುವಕ ಆಕೆಯೊಂದಿಗೆ ಸಲುಗೆಯಿಂದ ಇದ್ದನು ಎನ್ನಲಾಗುತ್ತಿದೆ. ಸಲುಗೆಯಿಂದ ಇದ್ದ ವೇಳೆ ಯುವತಿಯೊಂದಿಗೆ ತೆಗೆದ ಖಾಸಗಿ ಫೊಟೊಗಳನ್ನ ತನ್ನ‌ ಮೊಬೈಲ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನು.ಕೆಲ ದಿನಗಳ ನಂತರ ಯುವಕ ಭರತ್‌ ಯುವತಿಗೆ ತನ್ನ ಪ್ರೀತಿಯನ್ನು ಯುವತಿಯ…

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

ಶಾಲಾ ವಾಹನ ಅಪಘಾತ – ಬಸ್ ಗಾಗಿ ಕಾಯುತಿದ್ದ ವ್ಯಕ್ತಿ ಸಾವು|accident

ಶಾಲಾ ವಾಹನಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ.  ಅಪಘಾತದಲ್ಲಿ ವಿಶ್ವನಾಥ ಕೊಟ್ರಪ್ಪ ಬಾಜಿಗೊಂಡರ್ (37) ಸಾವನ್ಬಪ್ಪಿರುವ ದುರ್ದೈವಿಯಾಗಿದ್ದಾನೆ. ಬಾಜಿಗೊಂಡರ್  ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ವಾಸಿಯಾದ ಬಾಜಿಗೊಂಡರ್ ಶಿವಮೊಗ್ಗದಲ್ಲಿ ಚಾಲಕ ‌ವೃತ್ತಿ ನಿರ್ವಹಿಸುತ್ತಿದ್ದ. ದಾವಣಗೆರೆ ಕಡೆ‌ ಹೋಗಲು ‌ಕೂಡ್ಲಿಗೆರೆಯ ಗ್ರಾಮ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದನು. ಭದ್ರಾವತಿಗೆ ಬಂದು ಭದ್ರಾವತಿಯ ಮೂಲಕ ದಾವಣಗೆರೆಕಡೆ ಹೊರಡಲು ಸಜ್ಜಾಗಿದ್ದ ಬಾಜಿಗೊಂಡರ್ ಗೆ…

Read More