Headlines

Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾವಿರ ಭಾರಿ ಸೋಲುಂಡರು ಚಿಂತಿಸದೇ  ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್‌ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ  ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ : ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಮೂಗೂಡ್ತಿ ಕ್ಲಸ್ಟರ್ ಮಟ್ಟದ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ…

Read More

80 ಚೀಲ ಸೊಸೈಟಿ ಅಕ್ಕಿ ವಶ : ಒಬ್ಬನ ಬಂಧನ

ಬುದ್ಧನಗರದಲ್ಲಿ ವಾಹನ ತಪಾಸಣೆ ಮಾಡುವಾಗ ಅಕ್ರಮ ಅಕ್ಕಿ ಸಾಗಾಣಿಕೆ ಪತ್ತೆಯಾಗಿದೆ. ಬಿಪಿಎಲ್ ಕಾರ್ಡ ಹೊಂದಿದವರಿಗೆ ಉಚಿತವಾಗಿ ನೀಡುವ ಅಕ್ಕಿಗಳನ್ನ ಚೀಲದಲ್ಲಿ ತುಂಬಿಸಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಅಕ್ರಮ ಅಕ್ಕಿ ಪತ್ತೆಯಾಗಿದೆ. ಬುದ್ದನಗರದಲ್ಲಿ ಗ್ಯಾಸ್ ಪಂಪ್ ನಲ್ಲಿ ದೊಡ್ಡಪೇಟೆ ಪೊಲೀಸರು ಮತ್ತು ಆಹಾರ ನಿರೀಕ್ಷಕರು ಬ್ಯಾರಿಕೇಡ್ ನಿರ್ಮಿಸಿ ತಪಾಸಣೆ ಮಾಡುವಾಗ ಕೆಎ 15 ಎ ೪೨೬೬ ಕ್ರಮ ಸಂಖ್ಯೆಯ ವಾಹನದಲ್ಲಿ ಅಕ್ರಮ ಅಕ್ಕಿ ಪತ್ತೆಯಾಗಿದೆ.  ೫೦ ಕೆಜಿಯ ಒಟ್ಟು ೮೦ ಚೀಲಗಗಳು ಪತ್ತೆಯಾಗಿದೆ. ಈ ಅಕ್ಕಿಯನ್ನ…

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು|theft

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು ತೀರ್ಥಹಳ್ಳಿ : ಇಲ್ಲಿನ ವಾಟೆ ಮನೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ ಮೂವರ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ವಾಟೆಮನೆ ಬಸ್ ನಿಲ್ದಾಣದ ಸಮೀಪದ ಮುಳುಬಾಗಿಲು ವ್ಯಾಪ್ತಿಗೆ ಒಳಪಡುವ ವಾಟೆಮನೆ ದೇವಸ್ಥಾನದಲ್ಲಿ ಬೆಲೆಬಾಳುವ ಗಂಟೆ, ದೀಪ, ಕಾಣಿಕೆ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲು ಮೂವರು ಹೊಂಚು ಹಾಕಿದ್ದರು. ಸ್ಥಳೀಯರು ಅವರನ್ನು ಗಮನಿಸಿ ವಿಚಾರಿಸುವ ವೇಳೆ ಇಬ್ಬರು ಕಳ್ಳರು ಸಿಕ್ಕಿ ಹಾಕಿಕೊಂಡಿದ್ದರು….

Read More

ಸಂಘದ ಕಾರ್ಯವೈಖರಿಗೆ ಬೇಸತ್ತು ಭಂಡಾರಿ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ !!!

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳನ್ನೊಳಗೊಂಡ ಭಂಡಾರಿ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೇವರಾಜ್ ಭಂಡಾರಿ ಬಾಳೂರು ರಾಜಜೀನಾಮೆ ನೀಡಿದ್ದಾರೆ.  ಡಿ,3 ಶುಕ್ರವಾರ ಪಟ್ಟಣದ ಶ್ರೀ ಸಿದ್ದೇಶ್ವರ ದೇವಸ್ಥಾನ ಸಿದ್ದಪ್ಪನ ಗುಡಿ ದೇವಸ್ಥಾನ ಇಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸಂಘದ ಕಾರ್ಯವೈಖರಿಗೆ ಬೇಸತ್ತು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿ ಸಂಘದ ಅಧ್ಯಕ್ಷ ಹಿರಿಯಣ್ಣ ಭಂಡಾರಿ ಯವರಿಗೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಭೆಯಲ್ಲಿ ಭಂಡಾರಿ ಸಮಾಜದ ಮುಖಂಡರಾದ ನಾಗರಾಜ್ ಭಂಡಾರಿ ಅರಸಾಳು,ವಾಸು ಎಂ,ಬಾಲು ದೂನ,ಪಾಂಡುರಂಗ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಡಗರ: ಭೂ ತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ನದಾತರು ಭೂಮಿ ಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ ತಾಲೂಕಿನಲ್ಲಿ ಈ ಹಬ್ಬವನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತೆ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ವಿವಿಧ ಜಾತಿಯ ಸೊಪ್ಪನ್ನು ಬೆಟ್ಟದಿಂದ ಕೊಯ್ದು ತರುವ ಅನ್ನದಾತರು ಅದನ್ನು ಬೇಯಿಸುತ್ತಾರೆ. ಇದರ ಮಿಶ್ರಣಕ್ಕೆ ‘ಚರಗ’ ಎನ್ನುತ್ತಾರೆ. ಈ ಮಿಶ್ರಣವನ್ನು…

Read More

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ

ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…

Read More