Headlines

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ಗೋ ಸೇವೆ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮೊದಲು ಮಾಡಿದವರು ಶ್ರೀಗಳು : ಬಿ. ವೈ. ರಾಘವೇಂದ್ರ

ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು. ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು…

Read More

ಕ್ಷುಲ್ಲಕ ಕಾರಣಕ್ಕೆ ಹಾಡಹಗಲೇ ಶಿವಮೊಗ್ಗದ ಯುವಕನ ಕೊಲೆ:

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಗರದಲ್ಲಿ ಇಂದು ಹಾಡುಹಗಲೇ ಭೀಕರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಈ ಕೊಲೆ ಮಾಡಲಾಗಿದ್ದು, ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ರಾಹಿಲ್(20) ಕೊಲೆಯಾದ ಯುವಕನಾಗಿದ್ದು, ಅಜ್ಗರ್(19) ಕೊಲೆಮಾಡಿರುವ ಯುವಕನಾಗಿದ್ದಾನೆ.ನಿನ್ನೆ ಸಂಜೆ ಕೊಲೆ ಆರೋಪಿ ಅಜ್ಗರ್ ತಂದೆಯು ಟ್ಯಾಂಕ್ ಮೊಹಲ್ಲಾ ರಸ್ತೆಯಲ್ಲಿ ಸೈಕಲ್ ನಲ್ಲಿ ಬರುತ್ತಿದ್ದ ವೇಳೆ, ರಾಹಿಲ್ ನ ಬೈಕ್ ಡಿಕ್ಕಿ ಹೊಡೆದಿತ್ತು. ಈ ವಿಚಾರದಲ್ಲಿ ತನ್ನ ತಂದೆಯ ಸೈಕಲ್ ರಿಪೇರಿ ಮಾಡಿಕೊಡುವಂತೆ ಅಜ್ಗರ್ ತಿಳಿಸಿದ್ದನಂತೆ. ಈ ವೇಳೆ ಮಾತಿಗೆ ಮಾತು…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ: ಎರಡು ದೋಣಿಯಲ್ಲಿ ಕಾಲಿಡದಂತೆ ಆರ್ ಎಂ ಮಂಜುನಾಥ ಗೌಡ ಗೆ ಡಿಕೆಶಿ ಎಚ್ಚರಿಕೆ:

ರಿಪ್ಪನ್ ಪೇಟೆ: ಇಂದು ಪಟ್ಟಣದ ಗ್ರಾಮ ಪಂಚಾಯಿತಿಯ ರಾಷ್ಟ್ರಕವಿ ಕುವೆಂಪು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್ ಎಂ ಮಂಜುನಾಥ ಗೌಡರು  ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ ಎರಡು ದೋಣಿಯ ಮೇಲೆ ಕಾಲಿಡದಂತೆ  ಡಿಕೆ ಶಿವಕುಮಾರ್ ರವರು ಹೇಳಿದ್ದಾರೆ ಎಂದರು.  ಇದಕ್ಕಿಂತ ಮೊದಲೇ ನಾನು ಸಹಕಾರಿ ಕ್ಷೇತ್ರಕ್ಕೆ  ರಾಜಿನಾಮೆ ನೀಡುವವನಾಗಿದ್ದೆ.ನಮ್ಮ ಅಭಿಮಾನಿಗಳು ಪಕ್ಷದ ತೀರ್ಮಾನಕ್ಕಾಗಿ ಅಲ್ಲಿ ಕೆಲಕಾಲ ಮುಂದುವರೆಯ ಬೇಕಾಯಿತು.  ಅವರು…

Read More

ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested

ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು. ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ. ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ…

Read More

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಹರೀಶ್ ಎಂಬುವವರ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಂಡ ಬಳಿಕ, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ 29, 2025ರಂದು ತೀರ್ಪು ನೀಡಿದೆ. ವಿವಾಹದ ಬಳಿಕ ಹರೀಶ್ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ….

Read More

ಸಿಎಂ ಸಿದ್ದರಾಮಯ್ಯ ಮನವೊಲಿಕೆಗೂ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ! ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More
Exit mobile version