Headlines

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…

Read More

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು

ಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷಾಂತರ ರೂ ವಂಚನೆ – ಪ್ರಕರಣ ದಾಖಲು A Shivamogga man was cheated of ₹1.84 lakh by fraudsters posing as Kerala lottery officials, promising a ₹12 lakh prize and collecting money through QR code payments for fake taxes and charges. ಶಿವಮೊಗ್ಗ: ಕೇರಳ ಲಾಟರಿ ಬಹುಮಾನ ನೀಡುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ ₹1.84 ಲಕ್ಷ ರೂಪಾಯಿ ವಂಚಿಸಿದ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ | Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ. 1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ…

Read More

Sigandoor | ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ : ಕೆಳಗೆ ಬಿದ್ದು ಕಾರ್ಮಿಕ ಸಾವು

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ದಿಲೀಪ್ ಬಿಲ್ಡ್ ಕಂಪನಿಯ ಕಾರ್ಮಿಕ ಪಶ್ಚಿಮ ಬಂಗಾಳದ ರಬಿ ಉಲ್ ಇಸ್ಮಾಯಿಲ್(42) ಮೃತಪಟ್ಟ ವ್ಯಕ್ತಿ. ಸೇತುವೆ ಕಾಮಗಾರಿ ಕೆಲಸ ನಿರ್ವಹಿಸುವ ವೇಳೆ ಮೂರ್ಛೆ ಬಂದು ಕೆಳಗೆ ಬಿದ್ದಿದ್ದ ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಖಾಸಗಿ ಆಸ್ಪತ್ರೆಗೆ…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More
Exit mobile version