Headlines

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ | ಶೃಂಗಾರಗೊಂಡ ಸಖಿ ಪಿಂಕ್ ಮತಗಟ್ಟೆ ಕೇಂದ್ರ

93 ವರ್ಷದ ಹಿರಿಯ ಪತ್ರಕರ್ತ ಎಸ್.ಜಿ.ರಂಗನಾಥ ದಂಪತಿಯಿಂದ ಮತದಾನ ರಿಪ್ಪನ್‌ಪೇಟೆ;- ಆರಸಾಳಿನ ಹಿರಿಯ ಪತ್ರಕರ್ತ 93 ವರ್ಷದ ಎಸ್.ಜಿ.ರಂಗನಾಥ ಮತ್ತು ಹಿರಿಯ ಸ್ವಾತಂತ್ರ ಹೋರಾಟಗಾರ ದಿ.ಹುಂಚ ರಂಗರಾಯರ ಮಗಳು ನನ್ನ ಪತ್ನಿ 85 ವರ್ಷದ ಶ್ರೀಮತಿ ಶಾಂತಾರೊಂದಿಗೆ ಅರಸಾಳಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಯಾರ ಸಹಾಯವೂ ಇಲ್ಲದೆ ಮತಚಲಾವಣೆ ಮಾಡಿದರು. 1957 ರಲ್ಲಿ ನಡೆದ ದೇಶದ ಎರಡನೇ ಸಾರ್ವತ್ರಿಕ ಚುನಾವಣೆಯಿಂದಲೂ ಮತದಾನ ಮಾಡುತ್ತಿರುವುದಾಗಿ ತಮ್ಮ ಅನುಭವವನ್ನು ಮಾಧ್ಯಮ ಪ್ರತಿನಿಧಿಗಳ ಬಳಿ ಹಂಚಿಕೊಂಡ ಅವರು 1957…

Read More

ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft

ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು  ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…

Read More

ಸಮುದಾಯ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ರಿಪ್ಪನ್ ಪೇಟೆಯಲ್ಲಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ:

ರಿಪ್ಪನ್ ಪೇಟೆ :  ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಇಂದು ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ ನಡೆಸಲಾಯಿತು. ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ವಿನಾಯಕ ವೃತ್ತದವರೆಗೂ ಭಾರಿ ಮಳೆಯ ನಡುವೆ ಪಾದಯಾತ್ರೆ ನಡೆಸಿ ನಂತರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ನಂತರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಆರೋಗ್ಯ…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್‌ ಡ್ರೈವರ್‌ಗಳು|heart attack

ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್‌ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್‌ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್‌ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ. ಆ್ಯಂಬುಲೆನ್ಸ್‌ ಡ್ರೈವರ್‌ಗಳ ಮಾನವೀಯತೆ: ಇನ್ನೂ…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More
Exit mobile version