Headlines

ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ

ಕೋಡೂರು  : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ‌ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ‌. ಈ ದಾಳಿಯಲ್ಲಿ  ಅಬಕಾರಿ…

Read More

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು

Ripponpete | ಅಡಿಕೆ ಮರದಿಂದ ಕೆಳಗೆ ಬಿದ್ದು ರೈತ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಕಮ್ಮಚ್ಚಿ ಗ್ರಾಮದಲ್ಲಿ ಅಡಿಕೆ ಮರಕ್ಕೆ ಔಷದಿ ಸಿಂಪಡಿಸುವಾಗ ಮರದಿಂದ ಕೆಳಗೆ ಬಿದ್ದು ರೈತನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಮ್ಮಚ್ಚಿ ಗ್ರಾಮದ ಪ್ರದೀಪ್ ಟಿ ಕೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಮ್ಮಚ್ಚಿ ಗ್ರಾಮದಲ್ಲಿ ಇಂದು ಸಂಜೆ 4 ಗಂಟೆ ಸಮಯದಲ್ಲಿ ಅಡಿಕೆ ತೋಟಕ್ಕೆ ಔಷಧಿ ಸಿಂಪಡಿಸುತಿದ್ದ ರೈತ ಪ್ರದೀಪ್ ಆಯ ತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು…

Read More

ಸಾವಿರಾರು ಗರ್ಭಿಣಿಯರ ಪಾಲಿನ ಮಹಾದೇವತೆ ರಿಪ್ಪನ್‌ಪೇಟೆಯ ಸೂಲಗಿತ್ತಿ ಜಯಮ್ಮ- ಸಾವಿರಾರು ಹೆರಿಗೆ ಮಾಡಿಸಿರುವ ಗಟ್ಟಿಗಿತ್ತಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ|Ripponpet

ರಿಪ್ಪನ್‌ಪೇಟೆ : ಅದೆಷ್ಟೋ ಜನರ ಪಾಲಿಗೆ ಆಕೆ ಮಹಾತಾಯಿ. ಸಾವಿರಾರು ಪುಟ್ಟ ಕಂದಮ್ಮಗಳಿಗೆ ಕೈಯೊಡ್ಡಿದ ಮಹಾಮಾತೆ. ಹೌದು ಅವರೇ ನಮ್ಮ ರಿಪ್ಪನ್‌ಪೇಟೆ ಪಟ್ಟಣದ ಹೆಮ್ಮೆಯ ಸೂಲಗಿತ್ತಿ ಜಯಲಕ್ಷ್ಮಿ. ಆಪತ್ಕಾಲದಲ್ಲಿ ಗರ್ಭಿಣಿ ಮಹಿಳೆಯರ ಸಹಾಯಕ್ಕೆ ಬರುವ ಈ ಸೂಲಗಿತ್ತಿಯ ಹೆಸರು ಜಯಲಕ್ಷ್ಮಿ,ಇವರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸೂಲಗಿತ್ತಿ ಜಯಮ್ಮ ಅಂತಾನೇ ಫೇಮಸ್​. ಸರಿಯಾಗಿ ವಿದ್ಯುತ್​​, ರಸ್ತೆ, ಆಸ್ಪತ್ರೆ ಇಲ್ಲದ ಕಾಲದಲ್ಲಿ ಕಾಡು-ಮೇಡು ದಾಟಿ ಪ್ರಸವ ವೇದನೆ ನಿವಾರಿಸುತ್ತಿದ್ದ ಗಟ್ಟಿಗಿತ್ತಿ. ಜಯಮ್ಮ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಸಾಹಿತ್ಯಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಕನ್ನಡದ ಭಾಷೆ ಮತ್ತು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಲು ಕನ್ನಡದ ಮನಸ್ಸುಗಳನ್ನು ಜೋಡಿಸಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರು ಪ್ರಯತ್ನಿಸಿ ಕಾರ್ಯಚಟುವಟಿಕೆ ನಡೆಸಲಿ ಎಂದು ಮಾಜಿ ಸಚಿವ ಹಾಗೂ ಸಾಗರ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳುರವರು ಹೇಳಿದರು.  ಅವರು ಇಂದು ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ, ಗೌರವಿಸಿದರು. ಕನ್ನಡದ ಚಟುವಟಿಕೆಗಳು…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :

ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.  ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…

Read More
Exit mobile version