ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಹೊಸನಗರದಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ

ಹೊಸನಗರದಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯ Power outage scheduled in Hosanagara on April 12, 2026, from 10 AM to 6 PM due to maintenance and reconductoring work on the 33 KV Sagar–Hosanagara line, affecting multiple villages and town areas. ಹೊಸನಗರ ಉಪವಿಭಾಗ ವ್ಯಾಪ್ತಿಯಲ್ಲಿ ಭಾನುವಾರ (12.04.2026) ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 33 ಕೆ.ವಿ ಸಾಗರ–ಹೊಸನಗರ…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಕಾರಿಗೆ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಚಾನೆಲ್ ಗೆ ಇಳಿದ ಕಾರು : ಒಬ್ಬರ ಸಾವು

ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು  ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ. ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ…

Read More

ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿ : ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.   ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More