Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಿಸಿ ಅಭಿಮಾನ ಸಲ್ಲಿಸಿದ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮಸ್ಥರು

ಕನ್ನಡದ ಕುವರ ಕರ್ನಾಟಕದ ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಸಾವು ಇದೀಗ ಕರುನಾಡನ್ನು ಕಣ್ಣೀರಲ್ಲಿ ಕೈ ತೊಳಿಸಿತ್ತು.ಅಪಾರ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ದಾನ ಧರ್ಮದ ಕಾರ್ಯಗಳು ಎಂದಿಗೂ ಕೂಡ ಅಜರಾಮರ. ಅತಿ ಕಿರಿಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಕನ್ನಡದ ಕುವರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಅಭಿಮಾನಿಗಳು ವಿಶಿಷ್ಟ ರೀತಿಯ ಗೌರವವನ್ನು ಸಮರ್ಪಿಸಿದ್ದಾರೆ..ಸುಮಾರು 6ಅಡಿ ಎತ್ತರದಷ್ಟು ಪುನೀತ್ ರಾಜ್…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಬೋಜೆಗೌಡ ಭರ್ಜರಿ ಗೆಲುವು | MLC  ಶಿವಮೊಗ್ಗ  : ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ನಡೆದಿದ್ದು ಮತ ಎಣಿಕೆಯಲ್ಲಿ ಹಾಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ ಗೆಲುವು ಸಾಧಿಸಿದ್ದಾರೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹೊನ್ನಾಡಿ, ನ್ಯಾಮತಿ, ಚನ್ನಗಿರಿ ತಾಲೂಕು ವ್ಯಾಪ್ತಿಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಹಾಲಿ ಎಂಎಂಸಿ ಎಸ್ ಎಲ್ ಬೋಜೇಗೌಡ, ಐದು ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದಾರೆ. ಈ ಮೂಲಕ ಮಲೆನಾಡು…

Read More

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ನವರು ಮನೆ ಬಾಗಿಲಿಗೆ ಬಂದು ಕಿರಿಕಿರಿ ಮಾಡಿದರೆ ತಕ್ಷಣ ಈ ನಂಬರ್ ಗೆ ಕರೆ ಮಾಡಿ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬ್ರೇಕ್‌ ಹಾಕುವು ಸಲುವಾಗಿಯೇ ಕಾನೂನು ಜಾರಿ ಮಾಡಿದೆ. ಆದಾಗ್ಯು ಕೊಟ್ಟ ದುಡ್ಡು ವಾಪಸ್‌ ಕೊಡುವಾಗ, ಇಸ್ಕೊಂಡಾಗ  ಇದ್ದ ನಿಯತ್ತು ಇರಬೇಕಲ್ವಾ ಎನ್ನುತ್ತಲೇ ಸಾಲಗಾರರು ಮತ್ತಷ್ಟು ಕಿರುಕುಳ ನೀಡುತ್ತಿರುವ ಬಗ್ಗೆ ವರದಿಗಳು ಕೇಳಿಬಂದಿದೆ. ಶಿವಮೊಗ್ಗದಲ್ಲಿಯು ಇಂತಹ ಸಾಲದ ಕಿರುಕುಳ ಸಾಮಾನ್ಯವಾಗಿದೆ. ಹಣ ಪಡೆದವರು ಸ್ವಲ್ಪ ವೀಕ್‌ ಎಂದು ಗೊತ್ತಾಗುತ್ತಲೇ ಬಾಯಿಗೆ ಬಂದ ಹಾಗೆ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಕ್ಯಾಮರಾ ಹಾಗೂ ಡಿವಿಆರ್ ನ್ನು ಪುಷ್ಕರಣಿಗೆ ಎಸೆದ ಭೂಪರು|theft

ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಕಳವು – ದೇವಸ್ಥಾನದ ಸಿಸಿ ಟಿವಿಯನ್ನು ಪುಷ್ಕರಣಿಗೆ ಎಸೆದ ಭೂಪರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗುಳುಗುಳಿ ಶಂಕರ ಗ್ರಾಮದ ಇತಿಹಾಸ ಪ್ರಸಿದ್ದ  ಶಂಕರೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಕಿಟಕಿಯ ರಾಡ್ ತುಂಡರಿಸಿ ದೇವಸ್ಥಾನದ ಒಳಹೊಕ್ಕಿರುವ ಖತರ್ ನಾಕ್‌ ಕಳ್ಳರು ಹುಂಡಿಯನ್ನು ಒಡೆದು ಹಣವನ್ನು ಕದ್ದಿದ್ದಾರೆ. ಕಳ್ಳತನದ ಬಳಿಕ ದೇವಸ್ಥಾನದಲ್ಲಿ ಭದ್ರತೆ ಹಿನ್ನಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ಡಿವಿಆರ್ ನ್ನು ಕಿತ್ತು ಅಲ್ಲೆ ಸಮೀಪದಲ್ಲಿರುವ ಪುಷ್ಕರಣಿಗೆ ಎಸೆದು ಹೋಗಿದ್ದಾರೆ….

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚನೆ : ಪ್ರಕರಣ ದಾಖಲು|Cheating

ಹಾಸ್ಟೆಲ್ ನ ವಾರ್ಡನ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತನ್ನ ಪ್ರಭಾವದಿಂದ ಕೆಲಸ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗದ ನಿವಾಸಿಯಾದ ಸುನಿಲ್,ಸಾಗರದ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಹಿಳೆಯರಿಗೆ ಪರಿಚಿತನಾಗಿದ್ದಾನೆ. ಸುನಿಲ್ ಅವರಿಗೆ ಸುಳ್ಳು ಹೇಳಿ, “ನಾನು ಆನಂದಪುರದ ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಸಂಸ್ಥೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿದ್ದೇನೆ. ಅವರು ಅದೇ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್, ಹೌಸ್ ಕೀಪಿಂಗ್ ಸಿಬ್ಬಂದಿ ಮತ್ತು ಅಡುಗೆಯವರಾಗಿ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More