Headlines

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

Ripponpete | ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ

ಯೋಧನಾಗಿ ದೇಶ ಸೇವೆ ಮಾಡುವ ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟ – ಯುವ ಕ್ರೀಡಾಪಟುವಿನ ಕುಟುಂಬಕ್ಕೆ ದೊರಕುತ್ತಾ ಪರಿಹಾರ ಯೋಧನಾಗಿ ಭಾರತ ದೇಶದ ಸೇವೆಗೈಯುವ ಕನಸು ಕಂಡಿದ್ದ ಯುವಕ ವಿಧಿಯಾಟಕ್ಕೆ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿತ್ತು. ಹಳಿಯೂರು ಗ್ರಾಮದ ಬಡ ಕೂಲಿ ಕಾರ್ಮಿಕ ಶಂಕರಪ್ಪ ರವರ ಪುತ್ರ ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯೋಧನಾಗಬೇಕು ಎಂದು ಕನಸು ಕಂಡಿದ್ದ ಕಾರ್ತಿಕ್ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು….

Read More

ಸಹಸ್ರಾರು ಜನರ ಸಮ್ಮಿಲನಕ್ಕೆ ಸಾಕ್ಷಿಯಾದ ರಿಪ್ಪನ್‌ಪೇಟೆಯ ಹಿಂದೂ ಸಂಗಮ ಶೋಭಾಯಾತ್ರೆ

A grand Hindu Sangama Shobha Yatre was held in Rippanpete with the participation of thousands of devotees from surrounding villages, showcasing unity, culture, and tradition. ರಿಪ್ಪನ್‌ಪೇಟೆಯಲ್ಲಿ ಭವ್ಯ ‘ಹಿಂದೂ ಸಂಗಮ’ ಶೋಭಾ ಯಾತ್ರೆ; ಸಹಸ್ರಾರು ಜನರ ಭಾಗಿ ರಿಪ್ಪನ್‌ಪೇಟೆ: ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಶೋಭಾ ಯಾತ್ರೆ ಅತ್ಯಂತ ಅದ್ದೂರಿಯಾಗಿ ಜರುಗಿತು. ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಾಳೂರು ಹಾಗೂ ಜೇನಿ ಗ್ರಾಮ…

Read More

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More

SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ

ಭದ್ರಾವತಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 573(91.56) ಅಂಕಗಳನ್ನು ಗಳಿಸಿ ಅದ್ವಿತೀಯ ಸಾಧನೆಗೈದ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಶಾಂಕ್ ರವರಿಗೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಚನ್ನಕೇಶವ ಮತ್ತು ಲತಾಮಣಿ ದಂಪತಿಗಳ ಪುತ್ರನಾದ ಶಶಾಂಕ್ ರವರು ನ್ಯೂಟೌನ್ ನ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು SSLC ಪರೀಕ್ಷೆಯಲ್ಲಿ 91.56% ಅಂಕ ಗಳಿಸುವ ಮೂಲಕ ಶಾಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ

ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಮೊದಲ ದಿನದ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ SSLC ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :  ಈ ಬಾರಿಯ SSLC ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆದಿದ್ದಾರೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆ ಹಾಗೂ‌ ಮೇರಿ ಮಾತಾ ಶಾಲೆಯಲ್ಲಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.ಮೊದಲ ದಿನದ ಪರೀಕ್ಷೆಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಾಜರಾಗಿದ್ದರು. ಪೋಷಕರು ಪರೀಕ್ಷೆ ಮುಗಿಯುವವರೆಗೂ ಶಾಲಾ ಆವರಣದಲ್ಲಿ ಕಾಯುತ್ತಿದ್ದ ಸನ್ನಿವೇಶ ಕಂಡುಬಂತು.  ಹೊಸನಗರ ತಾಲೂಕಿನಲ್ಲಿ ಒಟ್ಟಿ 1620 ವಿದ್ಯಾರ್ಥಿಗಳಲ್ಲಿ 1615 ವಿದ್ಯಾರ್ಥಿಗಳು ಈ ಬಾರಿಯ SSLC ಪರೀಕ್ಷೆಗೆ ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು…

Read More