ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ

ರಿಪ್ಪನ್‌ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು  ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ರಿಪ್ಪನ್‌ಪೇಟೆ – 4.86 ಕೋಟಿ ರೂ ವೆಚ್ಚದ ಬಾಲಕರ ವಸತಿ ನಿಲಯ ಲೋಕಾರ್ಪಣೆಗೊಳಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ದೇಶದಲ್ಲಿ ವಿದ್ಯಾರ್ಜನೆಗೆ ಪ್ರಸ್ತುತ ಸಂಧರ್ಭದಲ್ಲಿ ವಿಫುಲವಾದ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ,ನಮ್ಮ ದೇಶ ನಾಗಲೋಟದಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಪಟ್ಟಣದಲ್ಲಿ 4 ಕೋಟಿ 86 ಲಕ್ಷ ರೂ ವೆಚ್ಚದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಾಗರ ಹೊಸನಗರ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ?

ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’: ಏನಿದು ? ಇದರ ಕೆಲಸ ಹೇಗೆ? ಮನುಷ್ಯ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಜೀವನವೇ ಬೇಡ ಎಂದು ಆತ್ಮಹತ್ಯೆ ಮಾಡಿಕೊಂಡು ಸಾಯುವವರ ಸುದ್ದಿಗಳನ್ನು ಪ್ರತಿನಿತ್ಯ ಮಾದ್ಯಮಗಳಲ್ಲಿ ನೋಡುತ್ತಿರುತ್ತೇವೆ. ಅದರಲ್ಲೂ ಭಾರತದಂತಹ ದೇಶಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಮಹಾ ಅಪರಾಧ. ಈ ಮಧ್ಯೆ ಸ್ವಿಟ್ಜರ್ಲೆಂಡ್ ದೇಶದಲ್ಲಿ ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಬಹುದಾದ ಯಂತ್ರ’ವನ್ನು ಕಂಡುಹಿಡಿದಿದೆ. ಅದುವೇ ʼಸೂಸೈಡ್‌ ಪಾಡ್‌ʼ (ಆತ್ಮಹತ್ಯಾ ಪಾಡ್).‌ ಏನಿದು ಯಂತ್ರ? ಇದರ ಕೆಲಸ ಹೇಗೆ? ಇಲ್ಲಿದೆ ವಿವರ… 46…

Read More

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft

ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು  ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ತಿರುಪಳಯ್ಯನ ಕೇರಿಯ ಸಂಪತ್‌ ಜ್ಯುವೆಲರಿ ಶಾಪ್‌ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…

Read More

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ. ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ…

Read More