Headlines

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು

ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಮಾತಿನ ಚಕಮಕಿಯಲ್ಲಿ ಚಾಕು ಇರಿತ, ಓರ್ವ ಸಾವು Vinod, who was seriously injured in the stabbing, died on the spot. Police said that the accused Vikram fled the scene after the incident. ಶಿವಮೊಗ್ಗ: ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದ ಪೆಟ್ರೋಲ್ ಬಂಕ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್ ಹಾಗೂ ವಿಕ್ರಮ್…

Read More

ಹೆದ್ದಾರಿಪುರ : ಗ್ರಾಪಂ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಕೆ|election

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಉಪ ಚುನಾವಣೆಗೆ ಬೇಕರಿ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.ಫೆ.25 ರ ಶನಿವಾರ ಚುನಾವಣೆ ನಡೆಯಲಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನ ತಳಲೆ ವಾರ್ಡ್ ನ ಸದಸ್ಯರಾಗಿದ್ದ ಚೂಡಾಮಣಿ ರವರು ಇತ್ತೀಚಿಗೆ ನಿಧನರಾದ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆಯುತಿದ್ದು ಈ ಸ್ಥಾನಕ್ಕೆ ಕ್ರೀಯಾಶೀಲ ಯುವಕ ಬೇಕರಿ ಸುರೇಶ್ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದು ಹೆದ್ದಾರಿಪುರ ಗ್ರಾಮ ಪಂಚಾಯತಿಯಲ್ಲಿ ಚುನಾವಣಾಧಿಕಾರಿ ಸತೀಶ್ ರವರಲ್ಲಿ ಬೇಕರಿ ಸುರೇಶ್ ನಾಮಪತ್ರ…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More