ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು. ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ  ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್…

Read More

Accident | ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಪತಿ ಸ್ಥಳದಲ್ಲೇ ಸಾವು , ಪತ್ನಿ ಗಂಭೀರ

ಬೈಕ್ ಗೆ ನಾಯಿ ಅಡ್ಡ ಬಂದು ಅಪಘಾತ – ಸವಾರ  ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ಬೈಕ್ ಚಲಿಸುವ ವೇಳೆ ನಾಯಿ ಅಡ್ಡ ಬಂದು ಅಪಘಾತವಾಗಿ ಸವಾರ ಸ್ಥಳದಲ್ಲೇ ಸಾವು ಕಂಡು ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಕಲ್ಮನೆ ಸಮೀಪದ ಹೆಗ್ಗೋಡಿ ನಲ್ಲಿ ನಡೆದಿದೆ. ಕಮ್ಮರಡಿ ಸಮೀಪದ ಅರೇಹಳ್ಳಿ ಗ್ರಾಮ ಪಂಚಾಯಿತಿಯ ಜೋಡುಕಟ್ಟೆ ಬೈಲು ಊರಿನ ಹಮೀದ್ (55) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹಮೀದ್ ಮತ್ತು ರೆಹಮತ್ ದಂಪತಿಗಳು ಇಂದು TVS ಜುಪಿಟರ್ ಸ್ಕೂಟರ್ ನಲ್ಲಿ ಹೋಗುವಾಗ ನಾಯಿ ಬೈಕ್…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

Hosanagara | ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್ ಶಿಬಿರ

ಗೊಂದಲದ ಗೂಡಾದ ಕೊಡಚಾದ್ರಿ ಕಾಲೇಜಿನ ಎನ್‌ಎಸ್‌ಎಸ್(NSS) ಶಿಬಿರ ಹೊಸನಗರದ(Hosanagara) ಕೊಡಚಾದ್ರಿ(kodachadri) ಸರಕಾರಿ ಪ್ರಥಮದರ್ಜೆ ಕಾಲೇಜು ತಾಲೂಕಿನ ಮಾರುತಿಪುರದಲ್ಲಿ (maruthipura) ಹಮ್ಮಿಕೊಂಡಿರುವ NSS ಶಿಬಿರವು ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ಸದಾ ಒಂದಿಲ್ಲೊಂದು ಯಡವಟ್ಟಿನ ಮೂಲಕ ಸುದ್ದಿಯಲ್ಲಿರುವ ಕೊಡಚಾದ್ರಿ ಕಾಲೇಜಿನ NSS ಶಿಬಿರದ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜನವರಿ 12ರಿಂದ ಆರಂಭಗೊಂಡು ಜ.18ರ ವರೆಗೆ ನಡೆಯಲಿರುವ ಈ ಶಿಬಿರದ ಕೆಲ ಅವ್ಯವಸ್ಥೆಗಳು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿವೆ. ಸ್ಥಳೀಯರ ಸಂಪರ್ಕವಿಲ್ಲ:  ರಾಷ್ಟ್ರೀಯ ಸೇವಾ ಯೋಜನೆಯ ಮೂಲತತ್ವವೇ ಸಮುದಾಯ…

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More