Headlines

ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಬಾಲಕನ ಮನೆಗೆ ಬೇಳೂರು ಭೇಟಿ :

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ ಇತ್ತೀಚಿಗೆ ಹಸು ಮೈ ತೊಳೆಯಲು ಹೋದಾಗ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಾಲಕನ ಮನೆಗೆ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಭೇಟಿ ನೀಡಿದರು. ಇಂದು ಮೃತ ಬಾಲಕನ ಮನೆಗೆ ಭೇಟಿ ನೀಡಿ ಮೃತ ಬಾಲಕನ ಪೋಷಕರಾದ ರಮೇಶ್ ಹಾಗೂ ಸುಧಾ ದಂಪತಿಗಳಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಂಧರ್ಭದಲ್ಲಿ ಪ್ರಶಾಂತ್,ಯೋಗೆಶ್ ,ರಮೇಶ್ , ದೇವೆಂದ್ರಪ್ಪ ,ಪೃಥ್ವಿ ಹಾಗೂ ಇನ್ನಿತರರಿದ್ದರು….

Read More

ಬೈಕ್ ಅಪಘಾತದಲ್ಲಿ Btv ವರದಿಗಾರ ಅನಿಲ್ ಸಾವು

BTV reporter Anil died after a tragic bike accident in Shivamogga near Vinobanagar Benki Nagar Road. He was undergoing treatment at a private hospital but succumbed to injuries. ಶಿವಮೊಗ್ಗ: ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿ.ಟಿವಿ ವಾಹಿನಿಯ ವರದಿಗಾರರಾದ ಅನಿಲ್ ಅವರು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ರಾತ್ರಿ ನಗರದ ವಿನೋಬನಗರದ ಬೆಂಕಿ ನಗರ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ…

Read More

ಅಕ್ರಮ ಗೋ ಸಾಗಾಟ – ವಾಹನ ಸಮೇತ ಹಸುಗಳನ್ನು ಪೊಲೀಸ್ ವಶಕ್ಕೆ ನೀಡಿದ ಸ್ಥಳೀಯರು | crime news

ಅಕ್ರಮ ಗೋ ಸಾಗಾಟ – ವಾಹನ ಸಮೇತ ಪೊಲೀಸ್ ವಶಕ್ಕೆ! ತೀರ್ಥಹಳ್ಳಿ : ಯಾವುದೇ ದಾಖಲೆ ಇಲ್ಲದೆ ಟಾಟಾ ಲೈಲ್ಯಾಂಡ್ ವಾಹನದಲ್ಲಿ 3 ಹಸುಗಳನ್ನು ತುಂಬಿಕೊಂಡು ಹೋಗುತ್ತಿದ್ದಾಗ ಕುರುವಳ್ಳಿಯಲ್ಲಿ ಸ್ಥಳೀಯರು ಹಿಡಿದು ವಾಹನ ಸಮೇತ ಹಸುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಂಠಿಕಟ್ಟೆಯಿಂದ – ಭದ್ರಾವತಿಗೆ ಹಸುವನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು ಯಾವುದೇ ದಾಖಲಾತಿ ಇರದ ಕಾರಣ ವಶಕ್ಕೆ ಪಡೆಯಲಾಗಿದೆ. ಯಾವ ಕಾರಣಕ್ಕೆ ಹಸು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿಲ್ಲ. ದಾಖಲೆ ಇಲ್ಲದ ಕಾರಣ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು ತೀರ್ಥಹಳ್ಳಿ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು

ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್ ಪೇಟೆಯಲ್ಲಿ ನಡದಿದ್ದೇ 2 ವರ್ಷಗಳ ನಂತರ ಗ್ರಾಮಸಭೆ ಆದರೂ ಹಿರಿಯ ಪತ್ರಕರ್ತ ಧರಣಿ ನಡೆಸಿದ್ದೇಕೆ ? ಹಲವು ರೋಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತೇ ರಿಪ್ಪನ್ ಪೇಟೆಯ ಗ್ರಾಮಸಭೆ!!

ರಿಪ್ಪನ್ ಪೇಟೆ: ಬರೊಬ್ಬರಿ ಎರಡು ವರ್ಷಗಳ ನಂತರ  ರಿಪ್ಪನ್ ಪೇಟೆಯ ಕುವೆಂಪು ಸಭಾಂಗಣದಲ್ಲಿ  ಗ್ರಾಮಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಹೌದು,ಎರಡು ವರ್ಷಗಳ ನಂತರ ನಡೆಯುತ್ತಿದ್ದ ಗ್ರಾಮ ಸಭೆಯಲ್ಲಿ ರಿಪ್ಪನ್ ಪೇಟೆ  ಗ್ರಾಮ ಪಂಚಾಯತಿಯ ಆಡಳಿತ ಕಾರ್ಯ ವೈಖರಿ ಖಂಡಿಸಿ ಹಿರಿಯ ಪತ್ರಕರ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಸಭೆಯಲ್ಲಿ ಏಕಾಂಗಿ ಧರಣಿ ನಡೆಸಿದ ಪ್ರಸಂಗವು ನಡೆಯಿತು. ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಬರೀಶ್ ನಗರದಲ್ಲಿ ಒಂದೇ ಕುಟುಂಬದ ಇಬ್ಬರ ನಡುವೆ ಇದ್ದ ಖಾತೆಗೆ…

Read More

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More