Headlines

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ : KSNDMC ಸ್ಪಷ್ಟನೆ |ಸುಳ್ಳು ಸುದ್ದಿಗೆ ಭಯಬೀತರಾದ ಜನ

ಇಂದು ಮಧ್ಯಾಹ್ನ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನದ ( Earthquake ) ಅನುಭವ ಉಂಟಾಗಿದೆ ಎನ್ನಲಾಗಿತ್ತು. ಆದ್ರೇ ಭೂ ಕಂಪನ ಸಂಭವಿಸಿಲ್ಲ ಎಂಬುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು(KSNDMC) ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೆ ಎಸ್ ಎನ್ ಡಿ ಎಂ ಸಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಲಿಂಗನಮಕ್ಕಿ ಅಣೆಕಟ್ಟು, ಹಾಸನ ಜಿಲ್ಲೆಯ ಹೇಮಾಪತಿ ಅಣೆಕಟ್ಟು, ಉತ್ತರ ಕನ್ನಡ ಜಿಲ್ಲೆಯ ಸೂಪಾ ಅಣೆಕಟ್ಟು, ಮೈಸೂರು ಜಿಲ್ಲೆಯ ಕೆ ಆರ್ ಎಸ್…

Read More

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More