Headlines

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ನಲ್ಲಿ ವಿಶ್ವ ವಜ್ರ ಪ್ರದರ್ಶನ|diamond show

ಶಿವಮೊಗ್ಗದ ಸುಲ್ತಾನ್ ಡೈಮಂಡ್ಸ್ ಮತ್ತು ಗೋಲ್ಡ್ ಶೋರೂಂನಲ್ಲಿ ವಿಶ್ವ ವಜ್ರ ಪ್ರದರ್ಶನವನ್ನು ಎಚ್ ಬಿ ಟಿ ಅರೆಕಾನಟ್‌ನ ಮಾಲಕಿ ದಿವ್ಯಾ ಪ್ರೇಮ್ ಉದ್ಘಾಟಿಸಿದರು.  ಮಾ. 8 ರಿಂದ 18 ರವರೆಗೆ ನಡೆಯುವ ಈ ಪ್ರದರ್ಶನದಲ್ಲಿ ಇಟಲಿ, ಫ್ರಾನ್ಸ್, ಅಮೆರಿಕ, ಬೆಲ್ಜಿಯಮ್, ಸಿಂಗಪೂರ್, ಟರ್ಕಿ ಮತ್ತು ಮಧ್ಯಪ್ರಾಚ್ಯ ದೇಶಗಳ ವಿವಿಧ ದೇಶಗಳ ವಜ್ರಾಭರಣಗಳನ್ನು ಅತಿಥಿಗಳು ಅನಾವರಣ ಗೊಳಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು.  ಈ ಆಭರಣಗಳು 10   ಸಾವಿರ ಕ್ಯಾರೆಟ್ ಐಜಿಐ ಪ್ರಮಾಣೀಕೃತ ೪ಸಿ ಪರಿಪೂರ್ಣ ನೈಸರ್ಗಿಕ ವಜ್ರಾಭರಣಗಳಾಗಿವೆ. ಎಪಿಎಂಸಿ…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More
Exit mobile version