Headlines

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…

Read More

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ : ಎಸಿಗೆ ಮನವಿ|iruvakki

ಹೊಸ ಕಲ್ಲುಕ್ವಾರೆಗೆ ಅವಕಾಶ ಬೇಡ; ಎಸಿಗೆ ಮನವಿ ಸಾಗರ : ತಾಲ್ಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರೆಗೆ ಅವಕಾಶ ನೀಡದಂತೆ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರೆಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು…

Read More

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು….

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ | Crime News

ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ…

Read More

ತೀರ್ಥಹಳ್ಳಿ:: ಸಂಘ ಪರಿವಾರದಿಂದ ಯಶಸ್ವಿ ರಕ್ತದಾನ ಶಿಬಿರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು. ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ  ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ  ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura

ಜ್ಞಾನದಿಂದ ಪ್ರಪಂಚವನ್ನೆ ಗೆಲ್ಲಬಹುದು – ಡಾ ಜಗದೀಶ್ ಹೊಸಮನಿ | Bankapura ಬಂಕಾಪುರ  :  ಈ ತಂತ್ರಜ್ಞಾನದ ಯುಗದಲ್ಲಿ ಸರ್ಕಾರಿ ಕಸಗೂಡಿಸುವನ ಕೆಲಸಕ್ಕೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿದೆ.ಸಮಯ ವ್ಯರ್ಥ ಮಾಡದೇ ಅಧ್ಯಯನ ಮಾಡಿ ಸಾಧಕರಾಗಿ ಹೊರಹೊಮ್ಮುವಂತೆ  ವಿದ್ಯಾರ್ಥಿಗಳಾಗಬೇಕು. ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ವಯ್ಯುವ ಶಕ್ತಿ ಶಿಕ್ಷಣಕ್ಕಿದೆ. ಅಂತಹ ಜ್ಞಾನವನ್ನು ವಿದ್ಯಾರ್ಥಿಗಳು ಪಡೆದು ಕೊಂಡಾಗ ಪ್ರಪಂಚವನ್ನೇ ಗೆಲ್ಲಬಹುದು ಎಂದು ಹಾವೇರಿ ಜಿ.ಎಚ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಗದೀಶ್ ಹೊಸಮನಿ ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More