Headlines

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read More

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಯೋಗೇಂದ್ರ ಶ್ರೀಗಳು

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು. ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್‌ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ಕ್ರೀಡೆಗಳು ಸೋಲು…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More