Headlines

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ|crime-news

ಮೊಬೈಲ್ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಒಂಬತ್ತು ಮಂದಿ ವಶಕ್ಕೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಸಮನೆ ಪ್ರದೇಶದಲ್ಲಿ  ನಿನ್ನೆ ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ. ಘಟನೆಯ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಘಟನೆಯ ಹಿನ್ನಲೆ : ಭದ್ರಾವತಿಯ ಹೊಸಮನೆಯ ಹನುಮಂತನಗರದಲ್ಲಿ ಗಾರೆ ಕೆಲಸ ಮಾಡುವ ಯುವಕ ನಂದಾ ಎಂಬಾತ ತನ್ನ ಮೊಬೈಲ್​ವೊಂದನ್ನ ಅಡವಿಟ್ಟಿದನಂತೆ. ಅದನ್ನು ಬಿಡಿಸಿಕೊಳ್ಳಲು ಹೋಗಿದ್ದ ಸಂದರ್ಭದಲ್ಲಿ ,ಅಡವಿಟ್ಟುಕೊಂಡಿದ್ದವರು ಮೊಬೈಲ್ ಕೊಡಲು ನಿರಾಕರಿಸಿದ್ದಾರೆ. ಈ ಸಂಬಂಧ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಯಕ್ಷಗಾನ ಕಲೆಗೆ ಸಾವಿರ ವರ್ಷದ ಇತಿಹಾಸವಿದೆ : ಶ್ವೇತ ಶ್ರೀಧರ್

ಹೊಸನಗರ : ಯಕ್ಷಗಾನ ಕಲೆಗೆ ಸಾವಿರಾರು ವರ್ಷಗಳ ಇತಿಹಾಸ ವಿದೆ.ಕಲಾವಿದರು ತಮ್ಮ ಪ್ರತಿಭೆ ಯನ್ನು ಯಾವುದೇ ತಯಾರಿ ಇಲ್ಲದೆ ಕ್ಷಣ ಕ್ಷಣಕ್ಕೂ ಪ್ರದರ್ಶನ ನೀಡಿ..ಭಾಗವತರ ಪದ್ಯಕ್ಕೆ ಹೆಜ್ಜೆ ಹಾಕಿ ಅರ್ಥ ಹೇಳುವ ಸ್ಪಷ್ಟ ಕನ್ನಡ ಉಚ್ಚಾರಣೆ ಮಾಡುವ ಕಲೆ…ಸಾಂಪ್ರದಾಯಿಕ, ಸಾಂಸ್ಕೃತಿಕ, ಕಲೆ ಯಕ್ಷಗಾನವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ರ್ಮೋಚಾ ಕಾರ್ಯದರ್ಶಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಶ್ವೇತ ಶ್ರೀಧರ್ ಹೇಳಿದರು. ಶುಕ್ರವಾರ  ಬೆಂಗಳೂರು ರವಿಂದ್ರ ಕಲಾ ಕ್ಷೇತ್ರದಲ್ಲಿ ಯಕ್ಷ ಮಿತ್ರ ಬಳಗ ಬೆಂಗಳೂರು ಹಾಗೂ ಕನ್ನಡ…

Read More