Headlines

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ A rape and cheating case has been registered in Shivamogga after a man allegedly promised marriage to an interstate woman, sexually exploited her, and later refused to marry her after she became pregnant. The accused is absconding. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು…

Read More

SSLC ಪರೀಕ್ಷೆ ಬರೆಯಲು ಪಿಕ್‌ಆಪ್‌ ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

SSLC ಪರೀಕ್ಷೆ ಬರೆಯಲು ಪಿಕ್‌ಆಫ್‌ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ಆಪ್‌ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು…

Read More

ಸಿ ಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಓರ್ವ ಮಹಿಳಾ ಪೇದೆ ಸೇರಿ ಹಲವರಿಗೆ ಗಾಯ|Accident

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಭದ್ರತೆ ಒದಗಿಸಲು ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ. ಮಸ್ಕಲ್ ಗ್ರಾಮದ ಮಂಜುಳಾ ಹಾಗೂ ಮಗ ಮನೋಜ್ ಗಾಯಾಳುಗಳು….

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ರಿಪ್ಪನ್‌ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್ ಕಾಮತ್ ಅವಿರೋಧ ಆಯ್ಕೆ : ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಬೇಳೂರು

ರಿಪ್ಪನ್ ಪೇಟೆ : ಇಲ್ಲಿನ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಗಣೇಶ್ ಎನ್.ಕಾಮತ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್‌ ಶಂಕರ್ ಶರಾಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಜುನಾಥ ಕಾಮತ್ (ಗೌರವಾಧ್ಯಕ್ಷರು), ಉಮೇಶ್‌ಭಟ್, ಸುಧೀಂದ್ರ ಪ್ರಭು (ಉಪಾಧ್ಯಕ್ಷರು), ಜೆ.ರಾಧಾಕೃಷ್ಣ (ಸಹಕಾರ್ಯದರ್ಶಿ), ಹರೀಶ್‌ಪ್ರಭು (ಸಂಘಟನಾ ಕಾರ್ಯದರ್ಶಿ), ಎಂ.ಆರ್.ಭಟ್ (ಖಜಾಂಚಿ) ಉಳಿದಂತೆ 20 ಕ್ಕೂ ಅಧಿಕ ಕಾರ್ಯಕಾರಿ ಸಮಿತಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿದ ಮಾಜಿ ಶಾಸಕ ಬೇಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯದ…

Read More

ಪವರ್ ಹೌಸ್ ನಲ್ಲಿ ದಿಡೀರ್ ಪ್ರತ್ಯಕ್ಷವಾದ ಚಿರತೆ : ಕೋಲಿನಿಂದ ಬೆದರಿಸಿ ಚಿರತೆ ಬಾಯಿಯಿಂದ ನಾಯಿಯನ್ನು ರಕ್ಷಿಸಿದ ಸೆಕ್ಯುರಿಟಿ ಗಾರ್ಡ್ : ವೀಡಿಯೋ ವೈರಲ್

ಮಾಸ್ತಿಕಟ್ಟೆ : ಮಲೆನಾಡಿನಾದ್ಯಂತ ಸೆಕ್ಯುರಿಟಿ ಗಾರ್ಡ್ ಒಬ್ಬರು ಚಿರತೆಯನ್ನು ಹೆದರಿಸಿ ನಾಯಿಯನ್ನು ರಕ್ಷಿಸಿದ  ವಿಡಿಯೋ ವೈರಲ್ ಆಗುತ್ತಿದೆ.  ಆ ರಾತ್ರಿ ಪವರ್ ಹೌಸ್ ನಲ್ಲಿ ನಡೆದಿದ್ದೇನು??? ಅವತ್ತು ರಾತ್ರಿ ಹೊಸಂಗಡಿ ಪವರ್ ಹೌಸ್ ಭದ್ರತಾ ಕೊಠಡಿಯಲ್ಲಿ ಸೆಕ್ಯುರಿಟಿ ಈರಪ್ಪ ಗೌಡ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಅಲ್ಲಿದ್ದ ಒಂದು ನಾಯಿಯನ್ನು ಎಲ್ಲಿಂದಲೋ ಬಂದ ಚಿರತೆಯೊಂದು ಹಿಡಿದು ಓಡಲು ಆರಂಭಿಸಿತು. ಅಷ್ಟರಲ್ಲಿ ಅಲ್ಲಿಯೇ ಇದ್ದ ಇನ್ನೊಂದು ಶ್ವಾನ ಜೋರಾಗಿ ಬೊಗಳಿದೆ. ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಈರಪ್ಪ…

Read More

ಸ್ನೇಹಿತರ ಜೊತೆ ಸೇರಿ ಹೆಂಡತಿಯ ಕೊಲೆಗೆ ಯತ್ನಿಸಿದ್ದ ಪತಿರಾಯ – ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್: ಈ ಸುದ್ದಿ ನೋಡಿ|court

ಮಹಿಳೆಯೋರ್ವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳಿಗೆ ಶಿವಮೊಗ್ಗ ನ್ಯಾಯಾಲಯ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 22 ಸಾವಿರ ರೂ ದಂಡ ವಿಧಿಸಿ‌ದೆ. 2016 ರಲ್ಲಿ ಶಿವಮೊಗ್ಗದ ಮಲವಗೊಪ್ಪ ಬಡಾವಣೆಯಲ್ಲಿ ಶೋಭಾ(26) ಮತ್ತು ಪತಿ ಹಾಲೇಶ್ ನಾಯ್ಕನಿಗೂ ಕೌಟಂಬಿಕ‌ ವಿಚಾರದಲ್ಲಿ ಗಲಾಟೆ ನಡೆದಿತ್ತು. ಇದರಿಂದ 2016 ರಲ್ಲಿ ಶೋಭಾ ತನ್ನ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದಲ್ಲಿ ನಿಂತಾಗ ಹಾಲೇಶ್ ನಾಯ್ಕ ಹರಿತವಾದ ಆಯುಧದಿಂದ ಆಕೆಯ ತಲೆ ಹಾಗೂ…

Read More

ಶಿವಮೊಗ್ಗ ಜಿಲ್ಲೆಗೆ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ.. ಪರಿಹಾರ ಯಾವ ಕಾಲಕ್ಕೋ!!!!!!

ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು. ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರ್ಗಲ್ ಆಸ್ಪತ್ರೆಗೆ ಸೀಮಾ ಬಾನು ಚಿಕಿತ್ಸೆಗೆ ಬಂದಾಗ ಶುಶ್ರೂಷಕಿಯರು ಜಿಲ್ಲಾ ವೈರಾಣು ಪರೀಕ್ಷಾ ಕೇಂದ್ರಕ್ಕೆ ಅವರ…

Read More

ರಿಪ್ಪನ್ ಪೇಟೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳಿ ಕ್ಷಮೆ ಕೋರದೆ ಇದ್ದರೆ ಬೇಳೂರು ವಿರುದ್ದ ಬಿಲ್ಲವ ಸಮಾಜದಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ :

ರಿಪ್ಪನ್ ಪೇಟೆ: ಸೊರಬದಲ್ಲಿ ಇತ್ತೀಚೆಗೆ ನಡೆದ ಈಡಿಗರ ಸಮುದಾಯದ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವಹೇಳನಕಾರಿಯಾಗಿ ಮಾತನಾಡಿದ್ದು ಕೂಡಲೇ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಕೆರೆಹಳ್ಳಿ ಹಾಗೂ ಹುಂಚಾ ಹೋಬಳಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜದ ಅಧ್ಯಕ್ಷರಾದ ಗರ್ತಿಕೆರೆ ಚಂದ್ರಪ್ಪ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಹೆಬ್ಬೆಟ್ಟು,ಅವರಿಗೆ ಯಾವುದೇ ವಿಧ್ಯಾಭ್ಯಾಸ ಇಲ್ಲ…

Read More