Headlines

ತರಗತಿಯಲ್ಲಿ ಹಿಜಾಬ್ ಧರಿಸಿ ವಿಧ್ಯಾರ್ಥಿನಿಯರು ಹಾಜರ್ : ಸಿಹಿ ಹಂಚಿ, ಹಿಜಾಬ್ ಗೆ ಅಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು

ರಿಪ್ಪನ್‌ಪೇಟೆ: ಶಾಸಕ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಪ್ರಯುಕ್ತ ಪಟ್ಟಣದ ಬಿಜೆಪಿ ಕಾರ್ಯಕರ್ತರು ಶ್ರೀಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸಿಹಿ ವಿತರಿಸುವ ಸಂದರ್ಭದಲ್ಲಿ ಹಿಜಾಬ್‌ಗೆ ಆಕ್ಷೇಪವ್ಯಕ್ತ ಪಡಿಸಿರುವ ಘಟನೆ ಇಂದು ನಡೆದಿದೆ.  ವಿಶೇಷ ಪೂಜೆಯ ನಂತರ ಪಕ್ಕದ ಸರ್ಕಾರಿ ಶಾಲೆಗೆ ತೆರೆಳಿದ ಬಿಜೆಪಿ ಮುಖಂಡರ ತಂಡ ತರಗತಿಯ ಒಳಗಡೆ ಮಕ್ಕಳಿಗೆ ಸಿಹಿ ಹಂಚುವ ಸಮಯದಲ್ಲಿ ಕೆಲವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವುದು ಗಮನಿಸಿದ್ದಾರೆ. ಅಸಮಧಾನಗೊಂಡ ಮುಖಂಡರು ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡು…

Read More

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ

HOSANAGARA | ಎಸ್ಎಸ್ಎಲ್ ಸಿ ವಿಧ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮ*ಹತ್ಯೆ HOSANAGARA | ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಮೃತಪಟ್ಟ ದುರ್ಧೈವಿಯಾಗಿದ್ದಾನೆ. SSLC ಓದುತಿದ್ದ ಅನುದೀಪ್ ಜಿ ದಿನಾಂಕ 15-11-2024 ರಂದು ಕಳೆನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅನುದೀಪ್ ಜಿ ಮೃತಪಟ್ಟಿದ್ದಾನೆ. ಹೊಸನಗರ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.  ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More

ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More