Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.

Read More

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು

Ripponpete | ತಳಲೆಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ – ಸ್ಥಳೀಯರಿಂದಲೇ ಮರ ತೆರವು ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಬಳಿಯಲ್ಲಿ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದು ಸಂಚಾರಕ್ಕೆ ವ್ಯತ್ಯಯವಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಮೂಗೂಡ್ತಿ – ತಳಲೆ ಸಂಪರ್ಕ ರಸ್ತೆಯಲ್ಲಿ ಮರವೊಂದು ಉರುಳಿಬಿದ್ದು ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು, ನಂತರ ಸ್ಥಳೀಯರೇ ಮರವನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದ್ದಾರೆ.

Read More

ಕನ್ನಡ ಭಾಷೆಗೆ ಮಡಿವಂತಿಕೆಯ ಬೇಲಿ ಬೇಡ – ಸರ್ಫ಼್ರಾಜ್ ಚಂದ್ರಗುತ್ತಿ|Ripponpet

ರಿಪ್ಪನ್‌ಪೇಟೆ : ಇಡೀ ಜಗತ್ತಿನಲ್ಲಿ ಕನ್ನಡ ತೆರೆದುಕೊಳ್ಳಬೇಕಾದರೆ ಕನ್ನಡಕ್ಕೆ ಮಡಿವಂತಿಕೆಯ ಬೇಲಿ ಬೇಡ ಎಂದು ಸಾಹಿತಿಗಳು ಹಾಗೂ ಉಪನ್ಯಾಸಕರಾದ ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು. ಪಟ್ಟಣದಲ್ಲಿ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ರಿಪ್ಪನ್ ಪೇಟೆ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರಸ್ತುತ ಆಧುನಿಕ ಕಾಲದಲ್ಲಿ ಸಂಶೋಧನೆ, ವೈದ್ಯಕೀಯ ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಸರಳವಾಗಿ ಬಳಸುವಂತಾಗಬೇಕು. ಹೊಸ ಕಾಲಕ್ಕೆ ಕನ್ನಡ ಕಟ್ಟುವ ಕೆಲಸವಾಗಬೇಕು,ಕನ್ನಡ ಭಾಷೆಯಲ್ಲಿ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ನಿರಾಶಾದಾಯಕ ಬಜೆಟ್ – ಅರ್ ಎ ಚಾಬುಸಾಬ್|budget 23-24

ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದ್ದು, ಅತಿ ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗೆ ಹೆಚ್ಚಿನ ಒತ್ತು ನಿಡುವಲ್ಲಿ ಎಡವಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ವಿಶ್ಲೇಷಿಸಿದ್ದಾರೆ. ಪಟ್ಟದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಯಾವುದೇ ಪ್ರೋತ್ಸಾಹವಿಲ್ಲದ ಪ್ರಗತಿಹೀನ ಬಜೆಟ್ ಆಗಿದ್ದು ರಾಜ್ಯದ ಪ್ರಗತಿಗೆ ಪೂರಕ ಅಂಶಗಳು ಈ ಬಜೆಟ್‍ನಲ್ಲಿ ಇಲ್ಲವೇ ಇಲ್ಲ. ತಮ್ಮ ಚುನಾವಣಾ ಗೆಲುವಿಗೆ ಬೇಕಾದ ಗ್ಯಾರಂಟಿ ಮೂಲಕ ಏನೇನು…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read More