Headlines

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ರಿಪ್ಪನ್‌ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು

ರಿಪ್ಪನ್‌ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು. ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್‌ಪೇಟೆ ಪಟ್ಟಣಕ್ಕೂ ಅವಿನಾಭಾವ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide

ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.  ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….

Read More

ಭದ್ರಾವತಿ: ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು

ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರನ್ನು ಭೇಟಿ ಮಾಡಿದ ಸಂಸದ ಬಿ ವೈ ರಾಘವೇಂದ್ರ – ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಕೆಗೆ ವೀರೇಶ್ ಆಲುವಳ್ಳಿ ಮನವಿ|BYR

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ಹೈಮಾಸ್ಕ್ ವಿದ್ಯುತ್ ದೀಪವನ್ನು ಉನ್ನತೀಕರಣಗೊಳಿಸುವಂತೆ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹೊಸನಗರ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಮನವಿ ಮಾಡಿದರು. ಕಾರ್ಯನಿಮಿತ್ತ ಬೈಂದೂರಿಗೆ ತೆರಳುತಿದ್ದ ಸಂಸದರು ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ ಸಂಸದರನ್ನು ಅಭಿನಂದಿಸಿದ ವೀರೇಶ್ ಆಲುವಳ್ಳಿ ಪಟ್ಟಣದ ವಿನಾಯಕ ವೃತ್ತದಲ್ಲಿ ಹೈಮಾಸ್ಕ್ ವಿದ್ಯುತ್ ದೀಪದ ಉನ್ನತೀಕರಣ ಹಾಗೂ ನಾಲ್ಕು ರಸ್ತೆಗಳಲ್ಲಿನ ಪ್ರಮುಖ ವೃತ್ತಗಳಾದ ಆಸ್ಪತ್ರೆ ವೃತ್ತ…

Read More