Headlines

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ ಸೊರಬ: ಅಪೂರ್ವ ಪ್ರಾಚೀನ ನರಸಿಂಹ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ತಾಲ್ಲೂಕಿನ ಕುಬಟೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ನರಸಿಂಹ ಕ್ಷೇತ್ರವೆನ್ನಲಾದ ಸೊರಬ ತಾಲ್ಲೂಕಿನಲ್ಲಿ ಅನೇಕ ನರಸಿಂಹ ದೇಗುಲಗಳಿವೆ. ಸುಮಾರು ಎರಡನೇ ಶತಮಾನದಿಂದ ನಾಲ್ಕನೆ ಶತಮಾನದ ಅವಧಿಯ ವಿಗ್ರಹಗಳು ಗಮನಸೆಳೆದಿದ್ದು ಕುಬಟೂರು ವಿಗ್ರಹ ಜಿಲ್ಲೆಯ ಕೆಲವೇ ಕೆಲವು ಪ್ರಾಚೀನ ವಿಗ್ರಹಗಳಲ್ಲಿ ಒಂದು. ಇತಿಹಾಸ ಆರಂಭಿಕ ಹಂತದ ವಿಗ್ರಹಗಳಾಗಿರುವ ಇವು ಕುಳಿತು ಮಣಿಯನ್ನು ಹಿಡಿದಿರುವ ಭಂಗಿಯಲ್ಲಿದ್ದು ಅನೇಕರ ಆರಾಧ್ಯ…

Read More

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More

ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More
Exit mobile version