ಅಕ್ರಮ ಮರಳು ಸಾಗಾಟದ ನಾಲ್ಕು ಟಿಪ್ಪರ್ ವಶಕ್ಕೆ ಪಡೆದ ಹೊಸನಗರ ಪೊಲೀಸರು :
ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ನೆನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ನಿಂಗರಾಜ್ ಬಿ ನರಲಾರ ರವರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ತಾಲೂಕಿನ ಮರಳು ಮಾಫ಼ಿಯಾ ದೊರೆಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆಯ ಖಚಿತ ಮಾಹಿತಿ ಆಧಾರದ ಮೇರೆಗೆ 4 ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆ ವೇಳೆ ನಾಲ್ಕು ವಾಹನಗಳ ಚಾಲಕರು ವಾಹನ…