Headlines

ಅಕ್ರಮ ಮರಳು ಸಾಗಾಟದ ನಾಲ್ಕು ಟಿಪ್ಪರ್ ವಶಕ್ಕೆ ಪಡೆದ ಹೊಸನಗರ ಪೊಲೀಸರು :

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ನೆನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ನಿಂಗರಾಜ್ ಬಿ‌ ನರಲಾರ ರವರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ತಾಲೂಕಿನ ಮರಳು ಮಾಫ಼ಿಯಾ ದೊರೆಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆಯ ಖಚಿತ ಮಾಹಿತಿ ಆಧಾರದ ಮೇರೆಗೆ 4 ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆ ವೇಳೆ ನಾಲ್ಕು ವಾಹನಗಳ ಚಾಲಕರು ವಾಹನ…

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು

ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…

Read More

Hosanagara | ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ

ಯಡೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ಸ್ಥಳದಲ್ಲಿ ಕೆಲಕಾಲ ಆತಂಕ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿಯಲ್ಲಿ ಐಟಿಐ ವ್ಯಾಸಾಂಗ ಮಾಡುತ್ತಿರುವ ಯಡೂರು ಮೂಲದ ಹರ್ಷ ಎಂಬ ವಿದ್ಯಾರ್ಥಿಯ ಮೇಲೆ ತೀರ್ಥಹಳ್ಳಿ ಮತ್ತು ಆಗುಂಬೆ ಮೂಲದ ಯುವಕರು ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಶನಿವಾರ ಸಂಜೆ 4.30 ಸಮಯದಲ್ಲಿ ಯಡೂರು ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರು…

Read More

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ ಹೊಸನಗರ: ತಾಲೂಕಿನ ಪುರಪ್ಪೇಮನೆ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪುರಪ್ಪೆಮನೆಯ ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪುರಪ್ಪೆಮನೆಯ ನದಿಯ ತೀರಕ್ಕೆ ದಾಳಿ ನಡೆಸಿ ಅಕ್ರಮ…

Read More

ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ

Uma Suresh of Ripponpet, director of Shivamogga Mahila Bank, was honored with the Best Woman Achiever Award at the International Women’s Day celebration held in Shikaripura. ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್ ಅವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ…

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ಕಾಡು ಹಂದಿ ಭೇಟೆ : ಮಾಂಸ ಸಹಿತ ಐವರ ಬಂಧನ

ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹೆಡದಾಳು ಗ್ರಾಮದಲ್ಲಿ ನಡೆದಿದೆ. ಹೆಡದಾಳು ಗ್ರಾಮದ ಮಧುಕುಮಾರ್, ಈರೇಶ ಜಯಪ್ಪ, ಕೃಷ್ಣ, ವಿಜಯ ಕುಮಾರ್ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ಷ್ಮೀಪುರ ಸಮೀಪದ ಲಕ್ಯಾ ಕ್ರಾಸ್ ಬಳಿ ಆಲ್ಟೋ ಕಾರನ್ನು ತಡೆದು ಶೋಧಿಸಿದಾಗ ಕಾಡು ಹಂದಿ ಮಾಂಸ ಪತ್ತೆಯಾಗಿದ್ದು, ಬಂಧಿತರಿಂದ 23 ಕೆಜಿ ಮಾಂಸ, ಬಂದೂಕು, ಸಜೀವ ಗುಂಡುಗಳು, ಕತ್ತಿ ಇತರೆ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.

Read More

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!

ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ  ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More