Headlines

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More

ನೇಣು ಬಿಗಿದ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಅರಣ್ಯದಲ್ಲಿ ಪತ್ತೆ|devangi

ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಅರಣ್ಯದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ದೇವಂಗಿ ಸಮೀಪದ ಇಂದಿರಾ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ಮಹಿಳೆಯನ್ನು ಶಶಿಕಲಾ (34) ಎಂದು ಗುರುತಿಸಲಾಗಿದೆ. ಶಶಿಕಲಾ ತಡರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು.ರಾತ್ರಿಯೆಲ್ಲಾ ಪತ್ನಿಗಾಗಿ ಹುಡುಕಾಟ ನಡೆಸಿದ ಪತಿ ಸುಬ್ರಹ್ಮಣ್ಯ ಇಂದು ಬೆಳಿಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಮಧ್ಯಾಹ್ನ ಮನೆಯ ಹಿಂಭಾಗ ಇರುವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಶಿಕಲಾ ಶವ ಪತ್ತೆಯಾಗಿದ್ದು ,ನೇಣು ಬಿಗಿದ ಸ್ಥಿತಿ ಅನುಮಾನಸ್ಪದವಾಗಿ ಕಂಡುಬಂದಿದ್ದು ಕೊಲೆಯ…

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More