Headlines

ಸಾಗರದಲ್ಲಿ ಡ್ರೈನೇಜ್ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವು :

ಸಾಗರ : ನಗರಸಭೆಯ ನಿರ್ಲಕ್ಷ್ಯಕ್ಕೆ ಡ್ರೈನೇಜ್ ಚರಂಡಿಗೆ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ‌ ನಗರದ ಲಿಮ್ರಾ ಟ್ರಾನ್ಸ್ ಪೋರ್ಟ್ ಮಾಲಿಕ ನವಾಬ್ ಜಾನ್(62) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬುಧವಾರ ಮದ್ಯಾಹ್ನ ಮಾರ್ಕೆಟ್ ನಿಂದ ಮನೆಗೆ ಹಿಂದಿರುಗುವ ಸಮಯದಲ್ಲಿ ಮೀನು ಮಾರ್ಕೇಟ್ ಬಳಿ ಇರುವ ಚರಂಡಿಗೆ ಬಿದ್ದು  ಅವಘಢ ಸಂಭವಿಸಿದೆ. ನವಾಬ್ ಜಾನ್ ತಮ್ಮ ದ್ವಿಚಕ್ರ ವಾಹನ ಸಮೇತ ಈ ಚರಂಡಿಗೆ ಬಿದ್ದು,ತಲೆಗೆ ತೀವ್ರತರವಾದ ಗಾಯಮಾಡಿಕೊಂಡಿದ್ದರು.ತಕ್ಷಣ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿಲಾಗಿತ್ತು ಆದರೆ ಚಿಕಿತ್ಸೆ…

Read More

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ|accident

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ, ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಶನಿವಾರ ಸಂಜೆ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.  ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತಿದ್ದ ಮಾರುತಿ ಓಮಿನಿ ಕಾರು ಗರ್ತಿಕೆರೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಸಾಗರ ಮೂಲದ ಒಂದೇ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

Shivamogga: ನಿಂತಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಡಿಕ್ಕಿ – ಚಾಲಕ ಗಂಭೀರ

ಶಿವಮೊಗ್ಗ: ಟಿಪ್ಪರ್ ಲಾರಿಗೆ ಆಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್‌ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ ಮಲವಗೊಪ್ಪ ಸಮೀಪದಲ್ಲಿ ನಡೆದಿದೆ. ನಿಲ್ಲಿಸಿದ್ದ ಟಿಪ್ಪರ್ ಗೆ ಆಂಬುಲೆನ್ಸ್ ಗೆ ಡಿಕ್ಕಿಯಾದ ಪರಿಣಾಮ ಆಂಬುಲೆನ್ಸ್ ನಜ್ಜುಗುಜ್ಜಾಗಿದೆ.ಭದ್ರಾವತಿ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌  ಮಲವಗೊಪ್ಪದ  ಬಳಿಯಲ್ಲಿ ನಿಂತಿದ್ದ ಟಿಪ್ಪರ್‌ ಲಾರಿಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ.

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ

ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ…

Read More

ರಿಪ್ಪನ್ ಪೇಟೆ : ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವು

 ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿಯಲ್ಲಿ  ಮನೆಯ ಸಮೀಪದಲ್ಲಿದ್ದ ಕೃಷಿ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ವಾಸು ಎಂಬುವರ ಪುತ್ರ  ಭರತ್ ರಾಜ್ (15) ಸಾವನ್ನಪ್ಪಿದ ದುರ್ಧೈವಿ. ಈತ ರಿಪ್ಪನ್ ಪೇಟೆಯ ಮೇರಿ ಮಾತ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು,ಈತನ ತಂದೆ ವಾಸು ಇದೇ ಶಾಲೆಯಲ್ಲಿ ಕಚೇರಿ ಸಹಾಯಕರಾಗಿ  ಕಾರ್ಯನಿರ್ವಹಿಸುತ್ತಿದ್ದರು. ಭರತ್ ರಾಜ್ ಶಾಲೆ ಮುಗಿಸಿಕೊಂಡು ಮನೆಯ ಬಳಿ ಆಟವಾಡಲು ತೆರಳಿದ್ದ ಸಮಯದಲ್ಲಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೋಲೀಸ್ ಠಾಣಾ…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More