Headlines

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

ವೀಕೆಂಡ್ ಕರ್ಫ಼್ಯೂ ಇರಲ್ಲ:ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ: ಅನ್ ಲಾಕ್ 3.0 ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ ಎರಡನೇ ಅಲೆಯ ಬಳಿಕ ಮೂರನೇ ಹಂತದ ಅನ್​ಲಾಕ್​​ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್‌ 3.O ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್​ಲಾಕ್ 3.O ಅನ್ವಯವಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್​ಲಾಕ್ ಅನ್ವಯವಾಗಲಿದೆ ಎಂದಿದ್ದಾರೆ. ಮಂಗಳೂರು, ಮೈಸೂರು ಸಹಿತ ಅನ್​ಲಾಕ್ 3.0 ಅನ್ವಯವಾಗಲಿದೆ. ಕೊವಿಡ್ ಉಸ್ತುವಾರಿ ಸಚಿವರ ಜೊತೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ…

Read More

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read More

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…

Read More

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು

ಕನ್ನಡ ಶಿಕ್ಷಕರನ್ನು ಒದಗಿಸಿ – ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದ ಹೊಸನಗರದ ವಿದ್ಯಾರ್ಥಿನಿಯರು ಶಿವಮೊಗ್ಗ: ಕನ್ನಡ ಶಿಕ್ಷಕರನ್ನು ಒದಗಿಸಿ ಎಂದು ಆಗ್ರಹಿಸಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು  ಹೊಸನಗರದಿಂದ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಘಟನೆ ಗುರುವಾರ ಇಲ್ಲಿ ನಡೆದಿದೆ. ಹೊಸನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಸಿದರು. ಕನ್ನಡ, ಇಂಗ್ಲೀಷ್ ಬರೆಯಲು ಬಾರದ ಉರ್ದು ಶಿಕ್ಷಕರಿಂದ ಕನ್ನಡ ಪಾಠ ಮಾಡಿಸಲು ಮುಂದಾಗಿರುವ…

Read More
Exit mobile version